ಈ ಮಳೆ, ಮಂಜಿನ ನಗರಿ ಮಡಿಕೇರಿಗೆ ದೊಡ್ಡ ಗಂಡಾಂತರ ತಂದೊಡ್ಡುತ್ತದೆ ಎನ್ನುವ ಆತಂಕಕ್ಕೆ ಕಾರಣವಾಗಿದೆ. ಹೌದು ಜಿಲ್ಲೆಯಲ್ಲಿ ಈ ಬಾರಿಯೂ ಭೂಕುಸಿತ ಮತ್ತು ಪ್ರವಾಹ ಎದುರಾಗುವ ಸಾಧ್ಯತೆ ಇರುವುದು ಒಂದೆಡೆಯಾದರೆ, ಮತ್ತೊಂದೆಡೆ ಮಂಜಿನ ನಗರಿ ಮಡಿಕೇರಿಯ ಹಲವು ಬಡಾವಣೆಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ನಗರದ ಇಂದಿರಾ ನಗರ, ಚಾಮುಂಡೇಶ್ವರಿ ನಗರ, ಮಂಗಳಾದೇವಿ ನಗರ, ಪುಟಾಣಿ ನಗರ, ಜ್ಯೋತಿ ನಗರ ಮತ್ತು ತ್ಯಾಗರಾಜ ಕಾಲೋನಿ ಸೇರಿದಂತೆ ಹಲವೆಡೆ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಹಾಗೂ ಜಿಲ್ಲಾಡಳಿತ ಕೂಡ ಸಭೆ ನಡೆಸಿ ಒಂದಷ್ಟು ಪೂರ್ವ ಸಿದ್ಧತೆ ನಡೆಸಿಕೊಳ್ಳುವಂತೆ ಮಡಿಕೇರಿ ನಗರಸಭೆಗೆ ಸೂಚಿಸಿದೆಯಂತೆ.