Published : May 21, 2023, 08:49 PM ISTUpdated : May 21, 2023, 09:00 PM IST
ಬೆಂಗಳೂರು (ಮೇ 21): ರಾಜ್ಯಾದ್ಯಂತ ಭಾನುವಾರ ಸುರಿದ ಭಾರಿ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು, ಮರ ಬಿದ್ದು ಹಾಗೂ ನೀರಿನಲ್ಲಿ ಮುಳುಗಿದ ಪ್ರತ್ಯೇಕ ಮೂರು ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಉಳಿದಂತೆ, ಮನೆ ಮೇಲ್ಛಾವಣಿ ಹಾರಿ ಹೋಗಿರುವುದು, ಆಲಿಕಲ್ಲು ಮಳೆ, ಬೆಳೆ ನಷ್ಟ, ಇತ್ಯಾದಿ ಪ್ರಕರಣ ವರದಿಯಾಗಿವೆ.