ತಪ್ಪಿದ ಭಾರೀ ಅನಾಹುತ; ಬಿರುಗಾಳಿ ಸಹಿತ ಭಾರೀ ಮಳೆಗೆ ಬಸ್ ಮೇಲೆ ಕಳಚಿಬಿದ್ದ ಕಟ್ಟಿಗೆಗಳು!

Published : May 11, 2024, 06:14 PM IST

ಧಾರವಾಡ ಜಿಲ್ಲೆಯಾದ್ಯಂತ ಬಿರುಗಾಳಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಈ ವೇಳೆ ರಸ್ತೆಬದಿ ನಿಂತಿದ್ದ ಖಾಸಗಿ ಬಸ್ ಮೇಲೆ ಈಜುಗೋಳ ಕಟ್ಟಡ ಕಟ್ಟಡ ನಿರ್ಮಾಣಕ್ಕೆ ಕಟ್ಟಿದ್ದ ಕಟ್ಟಿಗೆಗಳು ಬಿದ್ದು ಬಸ್ ಜಖಂ ಆದ ಘಟನೆ ನಡೆದಿದೆ.  

PREV
15
ತಪ್ಪಿದ ಭಾರೀ ಅನಾಹುತ; ಬಿರುಗಾಳಿ ಸಹಿತ ಭಾರೀ ಮಳೆಗೆ ಬಸ್ ಮೇಲೆ ಕಳಚಿಬಿದ್ದ ಕಟ್ಟಿಗೆಗಳು!

ಧಾರವಾಡ ನಗರದ ಈಜುಗೋಳ ಬಳಿ ಘಟನೆ ನಡೆದಿದೆ. ಈಜುಗೋಳ ನಿರ್ಮಾಣಕ್ಕೆ ಕಟ್ಟಿಗೆಗಳನ್ನ ಕಟ್ಟಲಾಗಿತ್ತು. ಕಟ್ಟಡ ಪಕ್ಕದಲ್ಲೇ ನಿಂತಿದ್ದ ಖಾಸಗಿ ಬಸ್. ಈ ವೇಳೆ ಭಾರೀ ಗಾಳಿ ಸಹಿತ ಮಳೆಯಾಗಿದ್ದರಿಂದ ಕಟ್ಟಿಗೆಗಳ ಬಸ್ ಮೇಲೆ ಕಳಚಿಬಿದ್ದಿವೆ.

25

ಬಸ್ ಮೇಲೆ ನೂರಾರು ಕಟ್ಟಿಗೆ ಬಿದ್ದ ರಭಸಕ್ಕೆ ಬಸ್ ಗಾಜು ಪುಡಿಪುಡಿಯಾಗಿದೆ. ಕಟ್ಟಡ ಕಾರ್ಮಿಕರು ಇಲ್ಲದ್ದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಇತ್ತ ಬಸ್‌ನಲ್ಲಿ ಮಲಗಿದ್ದ ಡ್ರೈವರ್, ಕ್ಲೀನರ್ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ ಕಿಟಕಿ ಗಾಜು ಸೇರಿದಂತೆ ಕೆಲ ಭಾಗಗಳಿಗೆ ಹಾನಿಯಾಗಿದೆ.

35

ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ರಸ್ತೆಯ ಎರಡು ಮೂರು ಅಡಿಗಳಷ್ಟು ನೀರು ಹರಿಯುತ್ತಿವೆ. ಇದರಿಂದ ವಾಹನಗಳು ಸಂಚರಿಸಲಾಗದೆ ನಡು ರಸ್ತೆಯಲ್ಲಿ ಸಿಲುಕಿ ಪರದಾಡುವಂತಾಯಿತು.

45

ನಗರದ ಎನ್‌ಟಿಟಿಎಫ್ ಬಳಿ ಮಳೆ ನೀರು ರಸ್ತೆಗೆ ನುಗ್ಗಿ ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಡಿದರು. ರಸ್ತೆಯ ಮೇಲೆ ರಭಸವಾಗಿ ಹರಿಯುತ್ತಿದ್ದ ಮಳೆ ನೀರಿನ ವಾಹನಗಳು ಮುಂದೆ ಚಲಿಸದೇ ನಿಂತವು. ಕೆಲವಡೆ ರಸ್ತೆ ಬದಿಯ ಅಂಗಡಿಗಳೀಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ

55

ರಸ್ತೆಯ ಮೇಲೆ ಎರಡು ಮೂರು ಅಡಿಯಷ್ಟು ನೀರು ಹರಿಯುತ್ತಿದ್ದರಿಂದ ಕಾರು ನೀರಲ್ಲಿ ಸಿಲುಕಿಕೊಂಡಿತ್ತು. ಏಕಾಏಕಿ ಸುರಿದ ಭಾರೀ ಮಳೆಗೆ. ವಾಹನ ಸವಾರರು, ಪ್ರಾಯಾಣಿಕರು, ಬೀದಿ ಬದಿ ವ್ಯಾಪಾರಿಗಳು ಪರದಾಡುವಂತಾಯಿತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories