ಇನ್ನು ಈ ವಿಷಯ ತಿಳಿದ ಚಿತ್ರದುರ್ಗ ತಹಸೀಲ್ದಾರ್ ನಾಗವೇಣಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕೃತಿ ವಿಕೋಪದಿಂದ ಆದ ನಷ್ಟಕ್ಕೆ ಅಗತ್ಯ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳಿಯ ಶಾಸಕ ವೀರೇಂದ್ರ ಪಪ್ಪಿ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದ್ರು ಆಗಮಿಸಲಿಲ್ಲ. ಅವರ ಬದಲಾಗಿ ನಡೆದಾಡುವ ಸೂಪರ್ ಶಾಸಕ ಎನಿಸಿರುವ ಶಾಸಕ ವೀರೇಂದ್ರ ಸಹೋದರ ನಾಗರಾಜ್ ಗ್ರಾಮಕ್ಕೆ ಭೇಟಿ ನೀಡಿ,ತಲಾ ಐದು ಸಾವಿರ ಪರಿಹಾರ ನೀಡಿದ್ರು. ಮುಂದಿನ ದಿನಗಳಲ್ಲಿ ಹಾನಿ ಆಗಿರುವ ಮನೆಗಳನ್ನು ಸರಿಪಡಿಸಿ ಕೊಡುವ ಭರವಸೆಯನ್ನು ಅಧಿಕಾರಿಗಳು ನೀಡಿದರು
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್