ಹೌದು ಪ್ರಸಿದ್ಧ ಪುಣ್ಯ ಕ್ಷೇತ್ರ ಭಾಗಮಂಡಲದಲ್ಲಿ ಭಗಂಡೇಶ್ವರನ ಸನ್ನಿಧಿ ಇದೆ. ಇಲ್ಲಿಗೆ ನಿತ್ಯ ನೂರಾರು ಭಕ್ತರು ಜಿಲ್ಲೆಯಷ್ಟೇ ಅಲ್ಲ, ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಬಂದು ಹೋಗುತ್ತಾರೆ. ಇಲ್ಲಿರುವ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ಹೊಂದಾಗುವ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ತ್ರಿವೇಣಿ ಸಂಗಮ ಕಳೆದ ಐದಾರು ವರ್ಷಗಳಿಂದ ಮಳೆಗಾಲ ಬಂತೆಂದರೆ ಈ ಮೂರು ನದಿಗಳು ಉಕ್ಕಿ ಹರಿದು ಪ್ರವಾಹದ ರೂಪ ತಳೆದು ನಾಲ್ಕೈದು ತಿಂಗಳ ಅವಧಿಯಲ್ಲಿ ಹಲವು ಬಾರಿ ಭಾಗಮಂಡಲವನ್ನು ಮುಳುಗಡೆ ಮಾಡಿ ಬಿಡುತಿತ್ತು. ಈ ಸಂದರ್ಭದಲ್ಲಿ ಭಾಗಮಂಡಲ, ಕೋರಂಗಾಲ, ಚೇರಂಗಾಲ, ತಲಕಾವೇರಿ, ಕುಯ್ಯಂಗೇರಿ, ಅಯ್ಯಂಗೇರಿ ಸೇರಿದಂತೆ ಸುತ್ತಮುತ್ತಲ ಹತ್ತಾರು ಹಳ್ಳಿಗಳ ಸಾವಿರಾರು ಕುಟುಂಬಗಳು ಪಡಬಾರದ ಕಷ್ಟ ಪಡುತ್ತಿದ್ದವು. ಅತ್ತಿಂದಿತ್ತ ಪ್ರವಾಹ ದಾಟಲಾಗದೆ ಸಂಕಷ್ಟ ಎದುರಿಸುತ್ತಿದ್ದವು.