ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ವರದಿ ಪ್ರಕಾರ ಮಡಿಕೇರಿ ನಗರ ಸೇರಿ ತಾಲ್ಲೂಕಿನ 47 ಸ್ಥಳಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಮಡಿಕೇರಿ ತಾಲ್ಲೂಕಿನ ಮೇಕೇರಿಯ ಶಕ್ತಿ ನಗರ ನವಗ್ರಾಮ, ಕೊಯನಾಡು, ಕಾಟಿಕೇರಿ, ಜೋಡುಪಾಲ, ಭಾಗಮಂಡಲ, ಕೋರಂಗಾಲ, ತಣ್ಣಿಮಾನಿ, ಚೆರಿಯಪರಂಬು, ಬಲಮುರಿ, ದೊಡ್ಡ ಪುಲಿಕೋಟು, ಎಮ್ಮೆಮಾಡು, ಹೆಮ್ಮೆತಾಳು, ಮೇಘತಾಳು, ಕಾಲೂರು, ಎರಡನೇ ಮೊಣ್ಣಂಗೇರಿ ಸೇರಿದಂತೆ 47 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಆಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದೆ. ಜೊತೆಗೆ ಮಡಿಕೇರಿಯ ಚಾಮುಂಡೇಶರಿ ನಗರ, ಇಂದಿರಾನಗರ, ಜ್ಯೋತಿ ನಗರ, ಮಂಗಳಾದೇವಿ ನಗರ, ಸುಬ್ರಹ್ಮಣ್ಯ ನಗರ, ಪುಟಾಣಿ ನಗರಗಳಲ್ಲಿ ಭೂಕುಸಿತ ಆಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಜೊತೆಗೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲ, ಊರುಬೆಟ್ಟ, ಮಕ್ಕಳಗುಡಿ ಬೆಟ್ಟ, ಶಾಂತಳ್ಳಿ, ತಲ್ತಾರೆ ಶೆಟ್ಟಳ್ಳಿ, ಕುಶಾಲನಗರ ತಾಲ್ಲೂಕಿನ ಹಾಲೇರಿ, ಜಂಬೂರು, ಮುವತ್ತೊಕ್ಲು, ಮುಳ್ಳುಸೋಗೆ, ಗುಮ್ಮನಕೊಲ್ಲಿ, ಕುಶಾಲನಗರದ ವಿವೇಕಾನಂದ ಬಡಾವಣೆ, ರಸೂಲ್ ಬಡಾವಣೆ, ಇಂದಿರಾ ಬಡಾವಣೆ, ಗಂದಧಕೋಟಿ ಸೇರಿದಂತೆ ತಾಲ್ಲೂಕಿನಲ್ಲಿ 56 ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಿದೆ.