ಧಾರಾಕಾರ ಮಳೆಗೆ ನಷ್ಟವಾಯ್ತು ಕಾಫಿ ಬೆಳೆ! ಸಂಕಷ್ಟದಲ್ಲಿ ರೈತರು!

Published : Aug 06, 2024, 08:33 PM IST

ಕಾಫಿನಾಡ ಮಲೆನಾಡು ಭಾಗದಲ್ಲಿ ಕಳೆದೊಂದು ತಿಂಗಳಿಂದ ತಿಂಗಳಿನಿಂದ ಸುರಿಯುತ್ತಿರುವ  ಭಾರೀ ಮಳೆ ಸೃಷ್ಠಿಸಿರೋ ಅವಾಂತರ ಒಂದೆರಡಲ್ಲ.ನಿರಂತರ ಮಳೆಯಿಂದ ಕಾಫಿ ಬೆಳೆ ನೆಲಕಚ್ಚಿದೆ ಬರಗಾಲದಿಂದ ತತ್ತರಿಸಿದ್ದ ರೈತರು ಇದೀಗ ಧಾರಾಕಾರ ಮಳೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ  ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು   

PREV
13
ಧಾರಾಕಾರ ಮಳೆಗೆ ನಷ್ಟವಾಯ್ತು ಕಾಫಿ ಬೆಳೆ! ಸಂಕಷ್ಟದಲ್ಲಿ ರೈತರು!

ಅತಿವೃಷ್ಠಿಯಿಂದ ಕಾಫಿನಾಡಿನ ಬಹುತೇಕ ಕಾಫಿ ಇಂದು ಮಣ್ಣುಪಾಲಾಗಿದ್ದು ಬೆಳೆಗಾರರು ಆತಂಕದಲ್ಲೇ ಬದುಕುವಂತಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. ಕಳೆದೊಂದು ತಿಂಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಪ್ರತಿ ತೋಟದ ಗಿಡದಡಿ ರಾಶಿ ರಾಶಿ ಕಾಫಿ ಬೀಜ ಬಿದ್ದಿರುವ ದ್ರಶ್ಯ ಕಂಡಬರುತ್ತಿದೆ. ಮಳೆ ಜೊತೆ ಬೀಸ್ತಿರೋ ರಣ ಗಾಳಿ ಕಾಫಿಯನ್ನ ಗಿಡದಿಂದ ಸಂಪೂರ್ಣ ನೆಲಕ್ಕುದುರಿಸಿದೆ. ಕಾಫಿ ಉಳಿದ್ರೆ ಬದುಕು ಉಳಿದಂತೆ ಎಂದು ಭಾವಿಸಿದ್ದ ಬೆಳೆಗಾರರಿಗೆ ಈ ಬಾರಿಯೂ ವರುಣದೇವ ಅನಾಹುತ ತಂದೊಡ್ಡಿ ಮತ್ತೆ ಚಿಂತಿಸುವಂತಾಗಿದೆ. ಅದರಲ್ಲೂ ಕಳೆದ ಹತ್ತು ದಿನಗಳಿಂದ ಚಿಕ್ಕಮಗಳೂರು ತಾಲೂಕ್ , ಮೂಡಿಗೆರೆ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರೈತರು ತೋಟದ ಪರಿಸ್ಥಿತಿಯನ್ನ ಕಂಡು ಕಣ್ಣಿರಿಡುವಂತಾಗಿದೆ. ಗಿಡವನ್ನ ಮುಟ್ಟಿದರೆ ಕಾಫಿ ನೆಲಕ್ಕುದುರುವ ಸ್ಥಿತಿ ನಿರ್ಮಾಣವಾಗಿದೆ. 
 

23

ಕಾಫಿನಾಡು ಚಿಕ್ಕಮಗಳೂರು ಅಂದಾಕ್ಷಣ ನೆನೆಪಾಗೋದೆ ಕಾಫಿತೋಟ. ಆದರೆ, ದೀಪದ ಕೆಳಗೆ ಕತ್ತಲು ಎಂಬಂತಾಗಿದೆ ಕಾಫಿಬೆಳೆಗಾರರ ಬದುಕು. ಕಳೆದ ಮೂರು ವರ್ಷದಿಂದ ಬೆಳೆಗಾರರು ಕಾಫಿಯನ್ನ ನಿರಂತರವಾಗಿ ಕಳೆದುಕೊಳ್ತಿದ್ದಾರೆ.ಈ ಬಾರಿಯಾದ್ರು ಮಳೆರಾಯ ನಮ್ಮ ಮೇಲೆ ಕೃಪೆ ತೋರಬಹುದು ಅಂತಾನೇ ಎಲ್ಲರೂ ಭಾವಿಸಿದ್ರು. ಆದ್ರೆ, ಈ ಬಾರಿಯೂ ಭಾರೀ ಮಳೆಯ ಜೊತೆಗೆ ಬಿರುಗಾಳಿ ಆರ್ಭಟಕ್ಕೆ ಕಾಫಿ ಫಸಲು ಮಣ್ಣುಪಾಲಾಗಿದೆ. ಕಾಫಿ ಫಸಲಿನ ಜೊತೆಗೆ ಕಾಫಿ ಗಿಡಗಳು ಕೂಡ ತೀವ್ರ ಶೀತದಿಂದ ಸಾಯುತ್ತಿದ್ದು ಭವಿಷ್ಯದ ಬಗ್ಗೆ ಬೆಳೆಗಾರರು ಕಂಗಾಲಾಗಿದ್ದಾರೆ.

33

ಡಿಸೆಂಬರ್-ಜನವರಿಯಲ್ಲಿ ಹಣ್ಣು ಆಗಬೇಕಿದ್ದ ಕಾಫಿ, ಈಗಾಗಲೇ ಕೆಂಪು ಬಣ್ಣಕೆ ತಿರುಗಿ ಹಣ್ಣಾಗಿದೆ. ಅಷ್ಟೇ ಅಲ್ಲದೇ ಮಳೆಯ ಹೊಡೆತಕ್ಕೆ ಕಾಫಿ ಉದುರಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಒಟ್ಟಾರೆ, ಈ ವರ್ಷವೂ ಭಾರೀ ಮಳೆಯಿಂದ ಕಾಫಿ ಬೆಳೆಗಾರರು ಸಂಪೂರ್ಣ ಹೈರಾಣಾಗಿದ್ದಾರೆ. ಸತತ ಹಲವು ವರ್ಷಗಳಿಂದ ಕಾಫಿ ಬೆಳೆಗಾರರು ಕಾಫಿಯನ್ನ ಕಳೆದುಕೊಳ್ಳುತ್ತಿರೋದ್ರಿಂದ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಎದುರಾಗಿದೆ. ಹಾಗಾಗಿ, ಬೆಳೆಗಾರರು ಸೂಕ್ತ ಪರಿಹಾರ ಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕೂಡಲೇ ಕೇಂದ್ರ್-ರಾಜ್ಯ ಸರ್ಕಾರ ಸಂಕಷ್ಟದಲ್ಲಿರೋ ಕಾಫಿ ಬೆಳೆಗಾರರ ನೆರವಿಗೆ ಬರಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories