ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

Published : Jun 18, 2024, 03:45 PM IST

ಬೆಂಗಳೂರು (ಜೂ.18): ಕರ್ನಾಟಕ ಸರ್ಕಾರದಿಂದ ಮಂತ್ರಾಲಯದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕರ್ನಾಟಕ ಭವನದ ಕಾಮಗಾರಿ ಕಳಪೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಲೋಕಾಯುಕ್ತರಿಗೆ ನೀಡಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆದೇಶಿದ್ದಾರೆ.

PREV
17
ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

ರ್ನಾಟಕದಿಂದ ಮಂತ್ರಾಲಯಕ್ಕೆ ಹೋಗುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ 100 ಕೊಠಡಿಗಳ ಅತಿಥಿಗೃಹ ನಿರ್ಮಾಣ ಮಾಡಲು 5 ಕೋಟಿ ರೂ.ಗಳನ್ನು 201ರರಲ್ಲಿ ಮಂಜೂರು ಮಾಡಲಾಗಿರುತ್ತದೆ. ಈ ವೆಚ್ಚದಲ್ಲಿ 2019ರಲ್ಲಿ 100 ಕೊಠಡಿಗಳ ಕರ್ನಾಟಕ ಭವನ ನಿರ್ಮಾಣ ಮಾಡಿ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿರುತ್ತದೆ.

27

ಆದರೆ, ಈ ಭವನದ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿಯ ಬಗ್ಗೆ ಗುಣಮಟ್ಟ ಪರೀಕ್ಷೆ ಮಾಡಿ, ಕಳಪೆ ಕಾಮಗಾರಿಗೆ ಕಾರಣವಾದವರ ಮೇಲೆ ಕ್ರಮ ಕೈಗೊಳ್ಳಲು ಪ್ರಕರಣದ ತನಿಖೆಯನ್ನು ಮಾಡಬೇಕಿದೆ.

37

ಈ ರೀತಿಯ ಕಳಪೆ ಕಾಮಾಗಾರಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟವಾಗಿರುವುದಲ್ಲದೇ, ಸಾರ್ವಜನಿಕ ಹಣವನ್ನು ಪೋಲು ಮಾಡಿರುವುದು ಹಾಗೂ ಭಕ್ತಾಧಿಗಳಿಗೆ ಅನಾನೂಕೂಲವಾಗಲು ಕಾರಣವಾಗಿರುತ್ತದೆ.

47

ಕರ್ನಾಟಕ ಭವನ ಕಾಮಗಾರಿಯು ಅತ್ಯಂತ ಕಳಪೆ ಮಟ್ಟದ್ದಾಗಿರುವುದಾಗಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿರುತ್ತದೆ. ಹಾಗೂ ಈ ಬಗ್ಗೆ ಜನಸಾಮಾನ್ಯರು ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿರುತ್ತಾರೆ.

57

ಕಳಪೆ ಕಾಮಗಾರಿಗೆ ಏನೆಲ್ಲಾ ಸಾಕ್ಷಿಗಳಿವೆ:
ಕರ್ನಾಟಕ ಭವನದ ಗೋಡೆಗಳು ಬಿರುಕು ಮೂಡಿವೆ.
ಕೊಠಡಿಗಳಲ್ಲಿ ನೀರು ಸೋರಿಕೆ ಆಗುತ್ತಿದೆ.
ವಿದ್ಯುತ್ ಸಂಪರ್ಕದ ಅವ್ಯವಸ್ಥೆ ಆಗಿದೆ.

67

ಕಳಪೆ ಕಾಮಗಾರಿಗೆ ಏನೆಲ್ಲಾ ಸಾಕ್ಷಿಗಳಿವೆ:
ಚರಂಡಿಗೆ ಸಂಪರ್ಕ ಕಲ್ಪಿಸಿದ ಪೈಪ್‌ಗಳ ಸೋರಿಕೆ ಆಗುತ್ತಿವೆ.
ಕಟ್ಟಡಕ್ಕೆ ಅಳವಡಿಸಿದ ಟೈಲ್ಸ್ ಗಳು ಹಾನಿಗೊಳಗಾಗಿವೆ.
ಬಿಸಿ ನೀರಿಗೆ ಅಳವಡಿಸಿದ ತುಂಬಾ ಗೀಸರ್‌ಗಳು ಕಾರ್ಯನಿರ್ವಹಿಸುತ್ತಿರುವುದಿಲ್ಲ. 
ಪ್ರತಿಯೊಂದು ಕೊಠಡಿಗಳ ಡೋರ್, ಕಿಟಕಿ, ಪೀಟೋಪಕರಣಗಳು ಕಳಪೆ ಗುಣಮಟ್ಟದ್ದಾಗಿವೆ.

77

ಈ ಮೇಲ್ಕಂಡ ಹಿನ್ನೆಲೆಯಲ್ಲಿ, ಸದರಿ ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಹಾಗೂ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲು ಪ್ರಕರಣವನ್ನು ಲೋಕಾಯುಕ್ತರವರಿಗೆ ವಹಿಸಲು ಆದೇಶಿಸಿದೆ ಎಂದು ಕಂದಾಯ ಇಲಾಖೆ ಮುಜರಾಯಿ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೂ ಪ್ರತೊ ದೊರಕುವಂತೆ ಮಾಡಿದ್ದಾರೆ.

click me!

Recommended Stories