Ganesh Chaturthi 2025: ಪರಿಸರಸ್ನೇಹಿ, ಮಣ್ಣಿನ ಗಣಪ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಮಂತ್ರಾಲಯ ಶ್ರೀಗಳು ಕರೆ

Published : Aug 27, 2025, 08:20 AM IST

ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು 100ಕ್ಕೂ ಅಧಿಕ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಭಕ್ತರಿಗೆ ವಿತರಿಸಿದರು.

PREV
13
ಮಂತ್ರಾಲಯದಲ್ಲಿ ಗಣಪತಿ ಹಬ್ಬದ ಸಂಭ್ರಮ

ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು 100ಕ್ಕೂ ಅಧಿಕ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಭಕ್ತರಿಗೆ ವಿತರಿಸಿದರು.

23
ಮಣ್ಣಿನ ಗಣಪ, ಪರಿಸರ ರಕ್ಷಣೆ

ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದ ಸುಬುಧೇಂದ್ರ ತೀರ್ಥರು ಶ್ರೀಗಳು, ಈ ಹಬ್ಬವನ್ನು ಸಂಪ್ರದಾಯದ ಜೊತೆಗೆ ಪರಿಸರ ಸ್ನೇಹಿಯಾಗಿ ಆಚರಿಸೋಣ. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಆಚರಿಸಿ. ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪ್ರಕೃತಿಯನ್ನು ಕಾಪಾಡುವ ಜವಾಬ್ದಾರಿಯನ್ನು ನಾವೆಲ್ಲರೂ ತೆಗೆದುಕೊಳ್ಳೋಣ  ಕರೆ ನೀಡಿದರು.

33
ಮಂತ್ರಾಲಯ ಶ್ರೀಗಳು ಮಾತು

ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿ, ಪರಿಸರ ಸ್ನೇಹಿ ಗಣಪತಿಯ ಮೂರ್ತಿಗಳನ್ನು ಸ್ವೀಕರಿಸಿದರು. ಮಂತ್ರಾಲಯ ಮಠದ ಈ ಪ್ರಯತ್ನವು ಸ್ಥಳೀಯರಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದೆ. ಮಣ್ಣಿನ ಮೂರ್ತಿಗಳ ಬಳಕೆಯಿಂದ ಪ್ಲಾಸ್ಟಿಕ್ ಮತ್ತು ಹಾನಿಕಾರಕ ವಸ್ತುಗಳ ಬಳಕೆ ಕಡಿಮೆಯಾಗಲಿದೆ. ಈ ಕಾರ್ಯಕ್ರಮವು ರಾಯಚೂರಿನ ಗಣೇಶ ಚತುರ್ಥಿ ಆಚರಣೆಗೆ ಹೊಸ ಆಯಾಮವನ್ನು ನೀಡಿದ್ದು, ಪರಿಸರ ಸಂರಕ್ಷಣೆಯ ಜೊತೆಗೆ ಆಧ್ಯಾತ್ಮಿಕ ಮಹತ್ವವನ್ನು ತಿಳಿಸಿದೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories