ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಬುಧವಾರ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಗುತ್ತಿದೆ.
ಬೆಂಗಳೂರು (ಜೂ.21): ಯೋಗ ನಮ್ಮ ದೇಶದ ಸಂಸ್ಕೃತಿ ಮತ್ತು ಪೂರ್ವಜರ ಕೊಡುಗೆ. ಸಾವಿರ ವರ್ಷಗಳ ಹಿಂದೇಯೆ ನಮ್ಮ ಪೂರ್ವಜರು ಬಿಟ್ಟುಹೋಗಿದ್ದಾರೆ. ಇಡೀ ವಿಶ್ವಕ್ಕೆ ಭಾರತ ಕೊಟ್ಟಿರುವ ಕೊಡುಗೆ ಇದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
216
ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ವಿಶ್ವದಲ್ಲೇ ಎಲ್ಲಾ ಕಡೆ ಯೋಗ ದಿನ ಆಚರಣೆ ಮಾಡ್ತಾರೆ.
316
ಯೋಗಭ್ಯಾಸ ಚುರುಕು ಉತ್ಸಹ, ದೈಹಿಕ ಮಾನಸಿಕ ಶುದ್ದಿಕರಣ ಯೋಗದಿಂದ ಸಿಗಲಿದೆ. ಇವತ್ತಿನ ದಿನಗಳಲ್ಲಿ ಖಾಯಿಲೆ ಹೆಚ್ಚಾಗಿವೆ ಎಂದರು. ಮಧುಮೇಹ, ಬಿಪಿ, ಕ್ಯಾನ್ಸರ್, ಹಾರ್ಟ್ ಅಟ್ಯಾಕ್ ಹೆಚ್ಚಾಗಿದೆ.ಇದಕ್ಕೆ ಕಾರಣ ನಮ್ಮ ಲೈಫ್ ಸ್ಟೈಲ್. ಯಾರು ಯೋಗ ಅಭ್ಯಾಸ ಮಾಡ್ತಾರೆ ಅವರಿಗೆ ಆರೋಗ್ಯ ಅನುಕೂಲ ಹೆಚ್ಚಾಗಲಿದೆ.
416
ನಮ್ಮ ಸರ್ಕಾರದಿಂದ ಯೋಗಕ್ಕೆ ಸಹಕಾರ ಪ್ರೋತ್ಸಾಹ ಮಾಡ್ತೀವೆ. ಶಾಲೆಗಳಿಂದಲೇ ಎಲ್ಲಾ ಕಡೆ ಯೋಗಭ್ಯಾಸಕ್ಕೆ ಪ್ರೋತ್ತಾಹವನ್ನು ಸರ್ಕಾರದ ವತಿಯಿಂದಲೂ ನೀಡುತ್ತೇವೆ ಎಂದರು.
516
ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
616
ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದಾರೆ.
716
ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ಚಿತ್ರ ನಟಿ ಭಾವನ್ ರಾಮಣ್ಣ, ಅದಿತಿ ಪ್ರಭುದೇವಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
816
ನಮ್ಮದೇ ಯೋಗಾಭ್ಯಾಸವನ್ನು ವಿಶ್ವಮಟ್ಟದಲ್ಲಿ ಕಲಿಯುತ್ತಿದ್ದಾರೆ: ನಾನು ಮೊದಲ ಬಾರಿಗೆ ಯೋಗ ಮಾಡಿದ್ದೇನೆ. ಈ ಅಭ್ಯಾಸವನ್ನ ಮುಂದುವರೆಸಬೇಕು ಅನಿಸಿದೆ. ಯೋಗ ಯಾರದ್ದು ಅಂದ್ರೆ ನಮ್ಮದು, ನಮ್ಮ ದೇಶದ್ದು. ನಮ್ಮದೇ ಯೋಗಾಭ್ಯಾಸವನ್ನು ವಿಶ್ವಮಟ್ಟದಲ್ಲಿ ಕಲಿಯುತ್ತಿದ್ದಾರೆ.
916
ಯಾವುದೋ ಸರ್ಕಾರ ಅಥವಾ ರಾಜಕಾಣಿಗಳಿಂದ ಯೋಗ ಬಂದಿರೋದಲ್ಲ ಎಂದು ಶಾಸಕ ರಿಜ್ವಾನ್ ಹರ್ಷದ್ ಹೇಳಿದರು.ಇದು ಸಾವಿರಾರು ವರ್ಷಗಳಿಂದ ಇರುವ ಅಭ್ಯಾಸವಾಗಿದೆ.
1016
ಋಷಿ ಮುನಿಗಳು ನಮಗೆ ಕೊಟ್ಟ ಕೊಡುಗೆ ಇದಾಗಿದೆ. ಯೋಗ ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ಇದೆ. ಯೋಗ ಮಾಡಿದ್ರೆ ಆರೋಗ್ಯ ಚೆನ್ನಾಗಿರುತ್ತೆ ಎಂದರು.
1116
9ನೇ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಔಷಧಿ ಸಸ್ಯಕ್ಕೆ ನೀರೆರುಯುವ ಮೂಲಕ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದರು.
1216
ಜೊತೆಗೆ ಆಯ್ಯುಷ್ ಇಲಾಖೆಯ ಅಂತಾರಾಷ್ಟ್ರೀಯ ಯೋಗಾದಿನ ಪೊಸ್ಟರ್ ಬಿಡುಗಡೆ ಮಾಡಿದರು. 9ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ವಿಧಾನಸೌಧದ ಮುಂಭಾಗ ನಡೆಯುತ್ತಿರುವ ಗಣ್ಯರ ಶಿಷ್ಟಾಚಾರ ಯೋಗಾಭ್ಯಾಸ ಮುಕ್ತಾಯವಾಗಿದೆ.
1316
ವೇದಿಕೆ ಕಾರ್ಯಕ್ರಮ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್, ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯುಟಿ ಖಾದರ್, ಶಾಸಕ ರಿಜ್ವಾನ್ ಹರ್ಷದ್, ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಆಯುಷ್ ಇಲಾಖೆ ಆಯುಕ್ತ ಮಂಜುನಾಥ್, ವಿಧಾನಪರಿಷತ್ ಸದಸ್ಯ ಶರವಣ, ಅಂತಾರಾಷ್ಟ್ರೀಯ ಅಥ್ಲೀಟ್ ಅಂಜು ಬಾಬಿ ಜಾರ್ಜ್, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ನಟಿ ಭಾವನ ರಾಮಣ್ಣ ಉಪಸ್ಥಿತರಿದ್ದರು.
1416
ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಗೈರಾದ ಕೈ ಸಚಿವರು ಶಾಸಕರು: ಮೈಸೂರು ಅರಮನೆಯಲ್ಲಿ ನಡೆಯುತ್ತಿರುವ ಯೋಗ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ 8 ಶಾಸಕರು ಗೈರಾಗಿದ್ದಾರೆ.
ಯೋಗ ಕಾರ್ಯಕ್ರಮದಲ್ಲಿ ಸರ್ವಧರ್ಮ ಗುರುಗಳು, ಹಿಂದೂ ಮುಸ್ಲಿಂ ಕ್ರೈಸ್ತ ಗುರುಗಳು ಭಾಗಿಯಾಗಿದ್ದರು. ಇನ್ನು ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಯೋಗಾಭ್ಯಾಸದಲ್ಲಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ