ಮಳೆಗಾಲ ಬಂತೆಂದ್ರೆ ಸಾಕು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿಯ ಸೌಂದರ್ಯವನ್ನ ವರ್ಣಿಸಲು ಪದಗಳೇ ಸಾಲದು. ನದಿಗಳು ಜೀವ ಕಳೆಯನ್ನ ಪಡೆದುಕೊಳ್ತಾವೆ. ಬಂಡೆಗಳ ಮೇಲಿನಿಂದ ಝುಳು-ಝುಳು ನಿನಾದ ಗೈಯುತ್ತಾ ಧುಮ್ಮಿಕ್ಕೋ ಜಲಧಾರೆಗಳುಪ್ರಕೃತಿಯೇ ಪ್ರಕೃತಿಗೆ ಮಾಡಿದ ಕ್ಷೀರಧಾರೆಯಂತೆ ಭಾಸವಾಗುತ್ತೆ. ನಿರಂತರ ಮಳೆಯ ಆಗಮನಕ್ಕೆ ಬೆಟ್ಟಗಳು ಸಾಲು ಹಸಿರೊದ್ದು ಝೇಂಕರಿಸುತ್ತಿದ್ರೆ, ಮಂಜಿನ ಕಣ್ಣಾಮುಚ್ಚಾಲೆ ಆಟ ಪ್ರವಾಸಿಗರ ಪಾಲಿನ ಸ್ವರ್ಗವಾಗಿ ಮಾರ್ಪಟ್ಟಿದೆ. ಸತತ ಮಳೆಯಿಂದ ಚಾರ್ಮಾಡಿ ಘಾಟಿನ ರಸ್ತೆಯುದ್ಧಕ್ಕೂ ಹತ್ತಾರು ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ಚಾರ್ಮಾಡಿಯ ಒಡಲಿನಿಂದ ಹಾಲ್ನೊರೆಯಂತೆ ಸೂಸೋ ಫಾಲ್ಸ್ಗಳು ನೋಡುಗರ ಕಣ್ಣನ್ನ ಕೊರೈಸುತ್ತಿದೆ.