ಮೆರವಣಿಗೆಯಲ್ಲಿ ನಾಡಿನ ನೂರಾರು ಮಠಾಧೀಶರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮುಸ್ಲೀಂ ಸಮುದಾಯ ಸೇರಿದಂತೆ ಸರ್ವ ಧರ್ಮದವರೂ ಮೆರವಣಿಗೆಯಲ್ಲಿ ಪಾಲ್ಗೊಂಡು ಭಾವೈಕ್ಯತೆಯ ಸಂದೇಶ ಸಾರಿದರು. ನಂತರ ನಡೆದ ವೇದಿಕೆ ಸಮಾರಂಭದಲ್ಲಿ, ಮುಂಡರಗಿ ಅನ್ನದಾನ ಶ್ರೀಗಳು, ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀಗಳು, ಗದಗನ ತೋಂಟದಾರ್ಯ ಮಠದ ಶ್ರೀ ಗಳು ಸೇರಿದಂತೆ ಅನೇಕ ಪೂಜ್ಯರು ಮತ್ತು ಗಣ್ಯರು ಭಾಗವಹಿಸಿದ್ದರು. ಇನ್ನು ಮುಂಡರಗಿ ತಾಲೂಕಿನ ಜನತೆಗೆ ಕುಮಾರೇಶ್ವರರ ಜಯಂತ್ಯೋತ್ಸವವು ನಾಡಹಬ್ಬವಾಗಿ, ಧಾರ್ಮಿಕ,ಸಾಂಸ್ಕೃತಿಕ ನೆಲೆಗಟ್ಟನ್ನ ಹೆಚ್ಚಿಸಿತು.
ನಾಡಿನ ಮಠಗಳಿಗೆ ಸ್ವಾಮಿಜಿಗಳನ್ನ ನೀಡಿದ ಕೀರ್ತಿ ಹಾನಗಲ್ಲ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ. ಅಂಥಹ ಯೋಗಿಯ ನೆನಪಿನಲ್ಲಿ, ಯುವ ಮಠಾಧೀಶರನ್ನೊಳಗೊಂಡ ಕುಮಾರೇಶ್ವರ ಜಯಂತಿ ಸಮಿತಿ, ಪ್ರತಿವರುಷ ಒಂದೊಂದು ಜಿಲ್ಲೆಯಲ್ಲಿ ಜನರಲ್ಲಿ ಧಾರ್ಮಿಕತೆ, ಹಾಗೂ ನಾಡಿನ ಸಂಸ್ಕೃತಿ ಅರಿವನ್ನ ಮೂಡಿಸುತ್ತಿದೆ. ವಿಶೇಷವಾಗಿ ಇಂದಿನ ಯುವಕರಲ್ಲಿ ವ್ಯಸನಮುಕ್ತ ಸಮಾಜ ಕಟ್ಟುವ ಸಂಕಲ್ಪದೊಂದಿಗೆ ಸಧೃಡ ಸಮಾಜ ನಿರ್ಮಿಸಲು ಹೊರಟಿದ್ದು, ನಿಜಕ್ಕೂ ಶ್ಲಾಘನೀಯ.