ಹನಿಟ್ರ್ಯಾಪ್ನ ಪೂರ್ಣ ವಿವರ:
ಕಂಪಲಾಪುರದ ದಿನೇಶ್ ಕುಮಾರ್ ಎಂಬವರು ತಮ್ಮ ಊರಿನಲ್ಲಿ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರ ಅಂಗಡಿಗೆ ಬಂದಿದ್ದ ಯುವತಿಯೊಬ್ಬರು ಪರಿಚಯ ಬೆಳೆಸಿ, ಬಳಿಕ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಮಾಡುತ್ತಿದ್ದರು. ನಿರಂತರವಾಗಿ ಸಲುಗೆಯನ್ನು ಬೆಳೆಸಿದ ನಂತರ, ಒಂದು ದಿನ ನಮ್ಮ ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿ ದಿನೇಶ್ ಅವರನ್ನು ಮನೆಗೆ ಆಹ್ವಾನ ನೀಡಿದ್ದಾಳೆ.
ಯುವತಿಯ ಮಾತಿನ ಮೇಲೆ ನಂಬಿಕೆ ಇಟ್ಟು ದಿನೇಶ್ ಆಕೆ ತಿಳಿಸಿದ್ದ ಮನೆಗೆ ಹೋಗುತ್ತಿದ್ದಂತೆ, ತಕ್ಷಣವೇ ಸ್ಥಳದಲ್ಲಿ ಇತರ ಇಬ್ಬರು ವ್ಯಕ್ತಿಗಳು ಹಾಗೂ ಪೊಲೀಸ್ ಪೇದೆ ಶಿವಣ್ಣ ಹಾಜರಾಗಿದ್ದಾರೆ. ಇಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬಂತೆ ದಾಳಿ ನಡೆಸಿ ದಿನೇಶ್ ಅವರನ್ನು ಥಳಿಸಿ, ಅವರ ವಿಡಿಯೋ ಶೂಟ್ ಮಾಡಿದ್ದಾರೆ. ನಂತರ ದಿನೇಶದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ₹10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.