ವಿಜಯನಗರದಲ್ಲಿ ಮೋದಿಗಾಗಿ ವಿಶೇಷ ಪೂಜೆ
ವಿಜಯನಗರ ಜಿಲ್ಲೆಯ ಹೊಸಪೇಟೆ ಗಣೇಶ್ ದೇವಾಲಯದಲ್ಲಿ ನರೇಂದ್ರ ಮೋದಿಯವರ ಆರೋಗ್ಯವೃದ್ಧಿಗಾಗಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗಣೇಶ ದೇಗುಲದಲ್ಲಿ ಪಂಚಾಮೃತ ಅಭಿಷೇಕ, ಪಷ್ಪಾಭಿಷೇಕ ಮಾಡಿದರು. ಈ ವೇಳೆ ಮಾಜಿ ಸಚಿವ ಆನಂದ್ ಸಿಂಗ್ ಪುತ್ರ(ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿ) ಸಿದ್ಧಾರ್ಥ್ ಸಿಂಗ್ ನೇತೃತ್ವದಲ್ಲಿ ನಡೆಯಿತು.