ಸಾಮಾಜಿಕ ಹೋರಾಟಗಾರ ವಸಂತ್ ಗಿಳಿಯಾರ್, ಧರ್ಮಸ್ಥಳ ಪ್ರಕರಣದಲ್ಲಿ ತಮಿಳುನಾಡಿನ ಸಂಸದ ಸಸಿಕಾಂತ್ ಸೆಂಥಿಲ್ ಜೊತೆಯಲ್ಲಿ ರಾಜ್ಯದ ಕಾಂಗ್ರೆಸ್ ವಕ್ತಾರೆಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆಯ ಕೈವಾಡವಿದೆ. ಹಾಗಾಗಿ ಈ ಸಂಬಂಧ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದ ಎಲ್ಲಾ ಸಂಸದರು ಪ್ರಕರಣವನ್ನು ಎನ್ಐಎ ಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಬೇಕು ಎಂದು ಮನವಿ ಮಾಡಿಕೊಂಡರು.