ನೂರಾರು ತಳಿಗಳ ನಂಟು:
ದೇಶದ ಹಲವಾರು ಜಾತಿಯ ಭತ್ತದ ತಳಿಗಳು ಇವರಲ್ಲಿದ್ದು ಕರ್ನಾಟಕದ 117, ಕೇರಳದ 25, ತಮಿಳುನಾಡಿನ 10, ಪಶ್ಚಿಮ ಬಂಗಾಳದ 5 ಮಹಾರಾಷ್ಟ್ರದ 2, ಆಂಧ್ರ, ಉತ್ತರ ಪ್ರದೇಶ, ಗುಜರಾತ್, ಛತ್ತಿಸ್ ಗಡ, ಮಣಿಪುರ, ದೆಹಲಿ,ಜಾರ್ಖಂಡ್, ಅಸ್ಸಾಂ,ಮಧ್ಯಪ್ರದೇಶ ಮೊದಲಾದ ರಾಜ್ಯಗಳ ಹಲವಾರು ಭತ್ತದ ತಳಿಗಳು ಇವರ ಸಂಗ್ರಹದಲ್ಲಿವೆ.
ಇವರ ಪುತ್ರ ಬಿ.ಕೆ. ಪರಮೇಶ್ವರ್ ರಾವ್ ಅವರು ತಂದೆಯ ಸಾಧನೆಗೆ ಬೆನ್ನೆಲುಬಾಗಿದ್ದು ಬೀಜ ಬ್ಯಾಂಕ್ ಸ್ಥಾಪಿಸಿ, ಬೇಡಿಕೆ ಇಡುವ ರೈತರಿಗೆ ತಮ್ಮ ತಂದೆಯ ಸಂಗ್ರಹದಲ್ಲಿರುವ ಭತ್ತದ ತಳಿಯ ಒಂದು ಮುಷ್ಟಿ ಭತ್ತ ನೀಡುವ ಯೋಜನೆ ಕೈಗೊಂಡಿದ್ದಾರೆ. ಒಂದು ಮುಷ್ಟಿ ಭತ್ತ ಒಯ್ಯುವ ರೈತ ಇದರ ಬೆಳೆ ಬೆಳೆದ ಬಳಿಕ ಎರಡು ಮುಷ್ಟಿ ಭತ್ತವನ್ನು ಇವರಿಗೆ ನೀಡಬೇಕು. ಇದರಿಂದ ಭತ್ತದ ತಳಿಗಳು ಹೆಚ್ಚು ಕಡೆ ಬೆಳೆಯಲು ಹಾಗೂ ಬೇಡಿಕೆ ಸಲ್ಲಿಸುವವರಿಗೆಲ್ಲ ನೀಡಲು ಸಹಕಾರಿಯಾಗುತ್ತದೆ.