ಆ ಹೂವಿನ ಹಾರ ಮಾತ್ರ ಬೇಡ; ಕಾರ್ಯಕರ್ತರಲ್ಲಿ ಡಿಕೆ ಶಿವಕುಮಾರ್ ವಿಶೇಷ ಮನವಿ

Published : Jun 01, 2026, 09:32 AM IST

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್, ತಾವಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮುಖ್ಯಮಂತ್ರಿಯಾಗುತ್ತಿರುವುದಾಗಿ ಹೇಳಿದ್ದಾರೆ. ತಮಗೆ  ಆ ಹೂವಿನಿಂದ ಅಲರ್ಜಿ ಇರುವುದರಿಂದ ಹಾರ ಹಾಕದಂತೆ ಮನವಿ ಮಾಡಿದ್ದು, ಅವರ ನಿವಾಸಕ್ಕೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.

PREV
14
ಪಕ್ಷದ ನಿಷ್ಠಾವಂತ ಕಾರ್ಯಕರ್ತ

‘ರಾಜ್ಯದಲ್ಲಿ ನಾನು ಮುಖ್ಯಮಂತ್ರಿಯಾಗುತ್ತಿಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮುಖ್ಯಮಂತ್ರಿ ಸ್ಥಾನಕ್ಕೇರುತ್ತಿರುವುದು’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಇದೇ ವೇಳೆ ಸುಗಂಧರಾಜ ಹೂವಿನ ಹಾರ ಹಾಕದಂತೆ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

24
ನಾನು ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ

ಭಾನುವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ರಾಜ್ಯಾದ್ಯಂತ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಇಲ್ಲಿ ನಾನು ಮುಖ್ಯಮಂತ್ರಿಯಾಗುತ್ತಿಲ್ಲ, ಪಕ್ಷದ ಕಾರ್ಯಕರ್ತ ಮುಖ್ಯಮಂತ್ರಿ ಆಗುತ್ತಿರುವುದು. ನಾನು ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ. ಪಕ್ಷದಲ್ಲಿದ್ದು ವಿದ್ಯಾರ್ಥಿ ನಾಯಕನಾಗಿ ಗೆದ್ದು ಬಂದಿದ್ದೇನೆ. ಅದರಿಂದ ಎಲ್ಲರಿಗೂ ಖುಷಿಯಾಗಿರಬಹುದು. ಕಾರ್ಯಕರ್ತ ಮುಖ್ಯಮಂತ್ರಿಯಾಗುತ್ತಿದ್ದಾನೆಂದು ಸಂಭ್ರಮಿಸುತ್ತಿರಬಹುದು ಎಂದರು.

34
ಹೂವಿನ ಹಾರ ತರಬೇಡಿ

ಪ್ರಮಾಣ ವಚನದ ನಂತರ ಕಾರ್ಯಕರ್ತರು, ನಾಯಕರು ಅಭಿನಂದಿಸಲು ಹೂವಿನ ಹಾರ ತರದಂತೆ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ನನಗೆ ಸುಗಂಧರಾಜ ಹೂವಿನಿಂದ ಅಲರ್ಜಿಯಿದೆ. ಸುಗಂಧರಾಜ ಹೂವು ಮುಟ್ಟಿದರೆ ನನಗೆ ಅಲರ್ಜಿಯಾಗಿ ತುರಿಕೆಯಾಗುತ್ತದೆ. ಹೀಗಾಗಿ ದಯವಿಟ್ಟು ಯಾರೂ ಹೂವಿನ ಹಾರ ಮಾತ್ರ ಹಾಕಬೇಡಿ ಎಂದು ಕೋರಿದರು.

44
ನಿಯೋಜಿತ ಸಿಎಂ ನಿವಾಸಕ್ಕೆ ಹೆಚ್ಚುವರಿ ಪೊಲೀಸ್‌ ಭದ್ರತೆ

ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸದಾಶಿವನಗರ ನಿವಾಸದ ಮುಂದೆ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಿ ಹೆಚ್ಚುವರಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಶಿವಕುಮಾರ್ ಅವರ ನಿವಾಸದ ಮುಂಭಾಗದ ರಸ್ತೆ ಉದ್ದಕ್ಕೂ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ರಸ್ತೆಯ ಎರಡೂ ಪ್ರವೇಶದಲ್ಲಿ ಬ್ಯಾರಿಕೇಡ್ ಹಾಕಿ ಪ್ರವೇಶ ನಿರ್ಬಂಧಿಸಲಾಗಿದೆ. ಸ್ಥಳೀಯ ವಾಹನಗಳು, ಆಪ್ತರ ವಾಹನಗಳನ್ನು ಬಿಟ್ಟು ಬೇರೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಕಾರ್ಯಕರ್ತರು, ಅಭಿಮಾನಿಗಳ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories