ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಜೆ 6.10ಕ್ಕೆ ಮೈಸೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಲಿದ್ದು, ಗುರುವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶುಕ್ರವಾರ ಬೆಳಗ್ಗೆ 10 .30ಕ್ಕೆ ಮಂಗಳೂರಿನಿಂದ ಶೃಂಗೇರಿಗೆ ಪ್ರಯಾಣ ಮಾಡಲಿದ್ದು, ಶುಕ್ರವಾರ ಬೆಳಗ್ಗೆ 11.50ಕ್ಕೆ ಶೃಂಗೇರಿಯಲ್ಲಿ ಶಂಕರ ಅದ್ವೈತ ರಿಸರ್ಚ್ ಸೆಂಟರ್ ಗೆ ಭೇಟಿ ನೀಡಲಿದ್ದಾರೆ. ಶುಕ್ರವಾರ ಸಂಜೆ 3.15ಕ್ಕೆ ಶೃಂಗೇರಿಯಿಂದ ಮಂಗಳೂರಿಗೆ ಪ್ರಯಾಣ ಮಾಡಲಿದ್ದು ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.