ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ರಾಜ್ಯ ಪ್ರವಾಸ ...

First Published Oct 6, 2021, 2:26 PM IST

ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ರಾಜ್ಯ ಪ್ರವಾಸ  ಕೈಗೊಂಡಿದ್ದು, ಏರ್ ಪೋರ್ಟ್ ನಿಂದ ನೇರವಾಗಿ ರಾಜಭವನಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ  ಮೂಲಕ ಅಗಮಿಸಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮ ನಡೆಯಲಿದ್ದು, ಇಂದು ರಾತ್ರಿ ರಾಜಭವನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ರಾಷ್ಟ್ರಪತಿ ಕೋವಿಂದ್..

Ramnath Kovind

ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ಏರ್ ಪೋರ್ಟ್ ನಿಂದ ನೇರವಾಗಿ ರಾಷ್ಟ್ರಪತಿಗಳು ರಾಜಭವನಕ್ಕೆ ಆಗಮಿಸಿದ್ದಾರೆ.

Ramnath Kovind

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ಸ್ವಾಗತಿಸಿದ್ದು, ಅಲ್ಲಿಂದ ರಾಜಭವನಕ್ಕೆ ಅಗಮಿಸಿರುವ ಅವರು ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ  ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ

Ramnath Kovind

ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರ ಜೊತೆ ಆಗಮಿಸಿದ  ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿವಿಧ ಕಾರ್ಯಕ್ರಮಗಳ ಬಳಿಕ ಇಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.   

Ramnath Kovind

 ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ರಾಜ್ಯ ಪ್ರವಾಸ ಇಂದಿನಿಂದ ಆರಂಭವಾಗಿದ್ದು, ನಾಳೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ  ಬೆಳಗ್ಗೆ 9.30ಗಂಟೆಗೆ ಮೈಸೂರಿಗೆ ರಾಷ್ಟ್ರಪತಿಗಳು ಬೆಂಗಳೂರಿನಿಂದ ತೆರಳಲಿದ್ದಾರೆ. 

Ramnath Kovind

ಗುರುವಾರ ಬೆಳಗ್ಗೆ 11. 30ಕ್ಕೆ ಬಿ.ಆರ್. ಹಿಲ್ಸ್ ನ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿರುವ ರಾಷ್ಟ್ರ ಪತಿ ರಾಮನಾಥ ಕೋವಿಂದ್ ಅವರು ಮಧ್ಯಾಹ್ನ 1.30ಕ್ಕೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ

Ramnath Kovind

 ರಾಷ್ಟ್ರಪತಿ ರಾಮನಾಥ್ ಕೋವಿಂದ್  ಮಧ್ಯಾಹ್ನ ನಾಳೆ 3.30ಕ್ಕೆ ಸಿಮ್ಸ್ ನಲ್ಲಿ 450 ಹಾಸಿಗೆಗಳ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5.15 ಕ್ಕೆ ಚಾಮರಾಜನಗರದಿಂದ ಮೈಸೂರು ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ

Ramnath Kovind

 ರಾಷ್ಟ್ರಪತಿ ರಾಮನಾಥ್ ಕೋವಿಂದ್  ಸಂಜೆ 6.10ಕ್ಕೆ ಮೈಸೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಲಿದ್ದು, ಗುರುವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.  ಶುಕ್ರವಾರ ಬೆಳಗ್ಗೆ 10 .30ಕ್ಕೆ ಮಂಗಳೂರಿನಿಂದ ಶೃಂಗೇರಿಗೆ ಪ್ರಯಾಣ ಮಾಡಲಿದ್ದು, ಶುಕ್ರವಾರ ಬೆಳಗ್ಗೆ 11.50ಕ್ಕೆ ಶೃಂಗೇರಿಯಲ್ಲಿ ಶಂಕರ ಅದ್ವೈತ ರಿಸರ್ಚ್ ಸೆಂಟರ್ ಗೆ ಭೇಟಿ ನೀಡಲಿದ್ದಾರೆ.  ಶುಕ್ರವಾರ ಸಂಜೆ 3.15ಕ್ಕೆ ಶೃಂಗೇರಿಯಿಂದ ಮಂಗಳೂರಿಗೆ ಪ್ರಯಾಣ ಮಾಡಲಿದ್ದು  ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

click me!