ಸರ್ಕಾರವು 6.20 ಕೋಟಿ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯ. ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಆಗ್ರಹಿಸಿದ್ದಾರೆ.