ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಅರಣ್ಯ ಭೂಮಿ ಸಾಗುವಳಿದಾರರು ತಮ್ಮ ಭೂಮಿಯ ಹಕ್ಕಿಗಾಗಿ ಪ್ರತಿಭಟನೆ ನಡೆಸಿದರು. ಮದನ್ ಗೋಪಾಲ್ ಸಮಿತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದರು.
ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯ್ತು.
25
ರೈತರ ಭೂಮಿಯ ಹಕ್ಕಿನ ಸಮಸ್ಯೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ
ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್, ನ್ಯಾಯವಾದಿ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತವಾಗಿದೆ.
35
ಸರ್ಕಾರದ ಇಚ್ಛಾಶಕ್ತಿ ಕೊರತೆಗೆ ಆಕ್ರೋಶ
ರೈತರ ಭೂಮಿಯ ಹಕ್ಕಿನ ಸಮಸ್ಯೆ ಪರಿಹಾರ ಮಾಡುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ