ರಾತ್ರಿ ಅಪ್ಪು ಪುತ್ಥಳಿ ಪ್ರತಿಷ್ಠಾಪನೆ, ಬೆಳಗ್ಗೆ ಪೊಲೀಸರಿಂದ ತೆರವು ಹೊನ್ನವಳ್ಳಿ ಗ್ರಾಮದಲ್ಲಿ ಬಿಗುವಿನ ವಾತಾವರಣ!

Published : Dec 21, 2024, 09:54 AM IST

ಅಭಿಮಾನಿಗಳು ಪ್ರತಿಷ್ಠಾಪಿಸಿದ್ದ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಪುತ್ಥಳಿಯನ್ನ ಪೊಲೀಸರು ತೆರವುಗೊಳಿಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ನಡೆದಿದ್ದು. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.  

PREV
14
ರಾತ್ರಿ ಅಪ್ಪು ಪುತ್ಥಳಿ ಪ್ರತಿಷ್ಠಾಪನೆ, ಬೆಳಗ್ಗೆ ಪೊಲೀಸರಿಂದ ತೆರವು ಹೊನ್ನವಳ್ಳಿ ಗ್ರಾಮದಲ್ಲಿ ಬಿಗುವಿನ ವಾತಾವರಣ!

ಹೊನ್ನವಳ್ಳಿಯಲ್ಲಿ ಗುರುವಾರ ರಾತ್ರಿ ಅಭಿಮಾನಿಗಳು ಪ್ರತಿಷ್ಠಾಪಿಸಿದ್ದ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಪುತ್ಥಳಿ. ಪ್ರತಿಷ್ಠಾಪನೆಗೆ ಮುನ್ನ ಅನುಮತಿ ಕೋರಿ ಡಿ.18 ರಂದು ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆಯಿಂದ ಗ್ರಾಮ ಪಂಚಾಯ್ತಿಗೆ ಮನವಿ ಸಲ್ಲಿಸಿದ್ದರು. ಆದರೆ ಮನವಿ ನಿರಾಕರಿಸಿದ್ದ ಪಂಚಾಯ್ತಿ.

24

ಪಂಚಾಯ್ತಿಯಿಂದ ಅನುಮತಿ ಸಿಗದ ಹಿನ್ನೆಲೆ ಗುರುವಾರ ಮಧ್ಯರಾತ್ರಿ ಪುನೀತ್ ರಾಜ ಕುಮಾರ ಪುತ್ಥಳಿ ಅನಾವರಣಗೊಳಿಸಿದ್ದ ಅಭಿಮಾನಿಗಳು. ಆದರೆ ಬೆಳಗಿನ ಜಾವ ಪೂಜೆ ಮಾಡಲು ತೆರಳುವಷ್ಟರಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪುತ್ಥಳಿ ತೆರವುಗೊಳಿಸಿದ್ದ ಪೋಲಿಸರು ಬಳಿಕ ಹೊನ್ನವಳ್ಳಿ ಗ್ರಾ.ಪಂ ಗೆ ಪುತ್ಥಳಿಯನ್ನು ಹಸ್ತಾಂತರ ಮಾಡಿದ್ದಾರೆ.

34

ಈ ಘಟನೆಯಿಂದ ಗ್ರಾಮಸ್ಟರು, ಅಪ್ಪು ಅಭಿಮಾನಿಗಳು ಪಂಚಾಯ್ತಿ, ಪೊಲೀಸರ ವಿರುದ್ಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪ್ಪು ಪುತ್ಥಳಿ ತೆರವುಗೊಳಿಸಿದ್ದರಿಂದ ಕನ್ನಡ ರಕ್ಷಣಾ ವೇದಿಕೆ ಅಪ್ಪು ಅಭಿಮಾನಿಗಳು, ಗ್ರಾಮಸ್ಥರು ಕಿಡಿಕಾರಿದ್ದಾರೆ. 

44

 ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.  ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿಆಂಧ್ರಾವಾಲ ಚಿತ್ರದ ರಿಮೇಕ್ ಆದ್ರೂ 'ವೀರ ಕನ್ನಡಿಗ'ಸೂಪರ್ ಹಿಟ್ ಮಾಡಿದ್ದ ಅಪ್ಪು!

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories