ಕಳೆದ ಎರಡು ದಿನಗಳ ಹಿಂದೆ ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಚುನಾವಣಾ ಭವಿಷ್ಯದ ವಿಚಾರದ ಬಗ್ಗೆ ಮಾತನಾಡಿದ ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಅವರು, 2016ರಲ್ಲಿ ಹೆಚ್.ಡಿ. ದೇವೆಗೌಡರು ತುಮಕೂರು ತಾಲೂಕಿನ ಚಿನಗ ಗ್ರಾಮದಲ್ಲಿರುವ ಮುಕಾಬಿಂಕಾ ದೇವಿ ಅಮ್ಮನ ಸನ್ನಿಧಿಯಲ್ಲಿ ಚಂಡಿಕಾಯಾಗ ಮಾಡಿಸಿದ್ದರು. ಅದರ ಫಲ 2024ಕ್ಕೆ ಲಭಿಸಿದೆ. ಅಂದೇ ಮುಕಾಬಿಂಕಾ ದೇವಿ ನಿಖಿಲ್ ಕುಮಾರಸ್ವಾಮಿಯವರ ಭವಿಷ್ಯ ನುಡಿದಿತ್ತು.
ಆಗ ಮಾಜಿ ಪ್ರಧಾನಿ ದೇವೇಗೌಡರ ಮುಂದೆ 2023ರ ನಂತರ ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಅದರಂತೆ, ನಿಖಿಲ್ ಕುಮಾರಸ್ವಾಮಿಗೆ 2023 ರಿಂದಲೇ ರಾಜಯೋಗ ಶುರುವಾಗಿದೆ. ನಿಖಿಲ್ ಕುಮಾರಸ್ವಾಮಿ ಮೇಲೆ ಭಗವತಿಯ ಪರಿಪೂರ್ಣ ಆಶೀರ್ವಾದ ಆಗಿದೆ. ಅಮ್ಮನವರು ಒಪ್ಪಿಗೆ ಸೂಚಿಸಿದ್ದಾರೆ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ತಿಳಿಸಿದ್ದಾರೆ.