ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ಸ್ಮರಣೆ

Kannadaprabha News   | Asianet News
Published : Aug 16, 2020, 09:10 AM IST

ಬೆಂಗಳೂರು(ಆ.16): ನಗರದಲ್ಲಿ ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 223ನೇ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಯಣ್ಣನ ತ್ಯಾಗ, ಬಲಿದಾನ ಸ್ಮರಿಸಲಾಯಿತು.

PREV
14
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ಸ್ಮರಣೆ

ರಾಜಕೀಯ ಪಕ್ಷಗಳು, ಸಂಗೊಳ್ಳಿ ರಾಯಣ್ಣನ ಹೆಸರಿನ ಸಂಘಟನೆಗಳು, ಮಹಾಸಭಾಗಳ ವತಿಯಿಂದ ನಗರದ ಹಲವಡೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ರಾಜಕೀಯ ಪಕ್ಷಗಳು, ಸಂಗೊಳ್ಳಿ ರಾಯಣ್ಣನ ಹೆಸರಿನ ಸಂಘಟನೆಗಳು, ಮಹಾಸಭಾಗಳ ವತಿಯಿಂದ ನಗರದ ಹಲವಡೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

24

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಸಮೀಪದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸರಳವಾಗಿ ಜಯಂತ್ಯುತ್ಸವ ಆಚರಿಸಲಾಯಿತು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಐದೈದು ಜನರಾಗಿ ಗಣ್ಯರು ತೆರಳಿ ಪ್ರತಿಮೆಗೆ ನಮಿಸಿದರು.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಸಮೀಪದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸರಳವಾಗಿ ಜಯಂತ್ಯುತ್ಸವ ಆಚರಿಸಲಾಯಿತು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಐದೈದು ಜನರಾಗಿ ಗಣ್ಯರು ತೆರಳಿ ಪ್ರತಿಮೆಗೆ ನಮಿಸಿದರು.

34

ಬಿಬಿಎಂಪಿ ಮೇಯರ್‌ ಗೌತಮ್‌ಕುಮಾರ್‌, ಉಪಮೇಯರ್‌ ರಾಮ್‌ ಮೋಹನ್‌ ರಾಜ್‌, ಆಯುಕ್ತ ಮಂಜುನಾಥ್‌ ಪ್ರಸಾದ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಶಾಸಕ ದಿನೇಶ್‌ ಗುಂಡೂರಾವ್‌, ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಕಾರ್ಯದರ್ಶಿ ವೆಂಕಟೇಶ್‌ ಮತ್ತಿತರರು ರಾಯಣ್ಣನ ಪ್ರತಿಮೆಗೆ ಪುಷ್ಪ ನಮನದ ಮೂಲಕ ಗೌರವ ಅರ್ಪಿಸಿದರು.

ಬಿಬಿಎಂಪಿ ಮೇಯರ್‌ ಗೌತಮ್‌ಕುಮಾರ್‌, ಉಪಮೇಯರ್‌ ರಾಮ್‌ ಮೋಹನ್‌ ರಾಜ್‌, ಆಯುಕ್ತ ಮಂಜುನಾಥ್‌ ಪ್ರಸಾದ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಶಾಸಕ ದಿನೇಶ್‌ ಗುಂಡೂರಾವ್‌, ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಕಾರ್ಯದರ್ಶಿ ವೆಂಕಟೇಶ್‌ ಮತ್ತಿತರರು ರಾಯಣ್ಣನ ಪ್ರತಿಮೆಗೆ ಪುಷ್ಪ ನಮನದ ಮೂಲಕ ಗೌರವ ಅರ್ಪಿಸಿದರು.

44

ರಾಯಣ್ಣನ ಪ್ರತಿಮೆ ಮುಂದೆ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 223ನೇ ಜಯಂತ್ಯುತ್ಸವದಲ್ಲಿ ಶಾಸಕ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ರಾಯಣ್ಣನ ಪ್ರತಿಮೆ ಮುಂದೆ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 223ನೇ ಜಯಂತ್ಯುತ್ಸವದಲ್ಲಿ ಶಾಸಕ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories