108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಪ್ರತಿಮೆಯ ವಿಶೇಷತೆಗಳು

First Published Jun 27, 2020, 12:08 PM IST

ಬೆಂಗಳೂರು(ಜೂ. 27):  ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್‌ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದ್ದಾರೆ.

ಕೆಂಪೇಗೌಡ ಅವರ ಮಾದರಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಿ.ಎಸ್‌.ಯಡಿಯೂರಪ್ಪ
undefined
ಕಾರ್ಯಕ್ರಮದಲ್ಲಿ ಭಾಗವಹಿಸಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ
undefined
ಥೀಮ್‌ ಪಾರ್ಕ್‌ನ ನೀಲನಕ್ಷೆ ವೀಕ್ಷಿಸಿದ ನಾಡಪ್ರಭು ಕೆಂಪೇಗೌಡ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ
undefined
ಭೂಮಿಪೂಜೆ ನೆರೆವೇರಿದ ಒಂದೇ ವರ್ಷದಲ್ಲಿ ಇಡೀ ಕಾಮಗಾರಿಯನ್ನು ಮುಗಿಸಿ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಣೆ
undefined
78 ಕೋಟಿ ರು. ವೆಚ್ಚದ ಯೋಜನೆ ಪೂರ್ಣಗೊಂಡ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ನಿರ್ವಹಣೆ
undefined
ಪ್ರತಿಮೆ ಎತ್ತರವನ್ನು ವೈಜ್ಞಾನಿಕವಾಗಿ 108 ಅಡಿಗೆ ನಿಗದಿ ಮಾಡಲಾಗಿದ್ದು, ತಾಂತ್ರಿಕವಾಗಿಯೂ ತುಂಬಾ ಕೆಲಸ ಮಾಡಲಾಗಿದೆ.
undefined
ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಸ್ಥಾಪಿಸಿರುವ ಮಹಾತ್ಮಗಾಂಧಿ ಹಾಗೂ ಗುಜರಾತ್‌ ರಾಜ್ಯದ ನರ್ಮದಾ ನದಿ ತೀರದಲ್ಲಿನ ಸರ್ದಾರ್‌ ವಲ್ಲಭಬಾಯಿ ಪಟೇಲರ ಪ್ರತಿಮೆಯನ್ನು ತಯಾರಿಸಿರುವ ಖ್ಯಾತ ಶಿಲ್ಪಿ ರಾಮಸುತಾರ ಅವರೇ ಕೆಂಪೇಗೌಡ ಅವರ ಪ್ರತಿಮೆ ವಿನ್ಯಾಸ ಸಿದ್ದಪಡಿಸಿದ್ದಾರೆ
undefined
ಅಧಿಕಾರಿಗಳಿಂದ ಪಾರ್ಕ್‌ ನಿರ್ಮಾಣದ ಕುರಿತು ಮಾಹಿತಿ ಪಡೆಯುತ್ತಿರುವ ಅಶ್ವತ್ಥನಾರಾಯಣ
undefined
500 ವರ್ಷಗಳ ಹಿಂದೆಯೇ ಎಲ್ಲಾ ಜಾತಿ ಧರ್ಮದವರಿಗೂ ಸಲ್ಲುವ ಬೆಂಗಳೂರಿನಂತಹ ಆಧುನಿಕ ಮಹಾನಗರವನ್ನು ಕಟ್ಟಿದ ಮಹಾಪುರಷನನ್ನು ಮುಂದಿನ ತಲೆಮಾರಿಗೂ ಪರಿಚಯಿಸಬೇಕು ಎಂದ ಏಕೈಕ ಉದ್ದೇಶದಿಂದ ಈ ಸ್ಮಾರಕ ನಿರ್ಮಾಣ
undefined
23 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುವ ಈ ಥೀಮ್‌ ಪಾರ್ಕ್‌ನಲ್ಲಿ ಕೆಂಪೇಗೌಡರ ಇತಿಹಾಸ ಸಾಧನೆ, ಪರಂಪರೆ ಸಾರಲಿದೆ. ಕನ್ನಡ, ಇಂಗ್ಲೀಷ್‌ನಲ್ಲಿ ಕೆಂಪೇಗೌಡರ ಸಾಹಿತ್ಯ ಲಭ್ಯ, ದೃಶ್ಯರೂಪದ ಧ್ವನಿ ಬೆಳಕಿನ ಕಾರ್ಯಕ್ರಮ ತಾಣ ನಿರ್ಮಾಣ
undefined
ವಿಶಾಲವಾದ ಪಾದಚಾರಿ ಮಾರ್ಗ ನಿರ್ಮಾಣ, ಕೆಂಪೇಗೌಡರ ಕಾಲದ ಪೇಟೆಗಳಂತೆ ವಿನ್ಯಾಸ
undefined
ಕೆರೆಟ್ಟೆಗಳು, ಒಂದಕ್ಕೆ ಒಂದು ಬೆಸೆಯುವ ಹಲವು ನಾಲೆಗಳ ಸೃಷ್ಟಿ , ಅರಿಶಿನ- ಕುಂಕುಮ ಪ್ರತಿಬಿಂಬಿಸುವ ಹೂದೋಟ ನಿರ್ಮಾಣ
undefined
click me!