20 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್ಡಿಆರ್ಎಫ್, ಎನ್ಡಿಆರ್ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ. ಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 19 ಗಂಟೆಗಳಿಂದ ಅನ್ನ ನೀರು ಇಲ್ಲದೆ ಜೀನ್ಮರಣ ಹೋರಾಟ ನಡೆಸುತ್ತಿತ್ತು. ಸಾವಿರಾರು ಮಂದಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಮಗು ಜೀವಂತವಾಗಿ ಬಂದಿದೆ.