ಹಿಮಾಲಯದಲ್ಲಿ ನೆಲೆಯಾಗಿರುವ ಕೇದಾರನಾಥ ದೇವಾಲಯವು (Kedarnath Temple) ಆರು ತಿಂಗಳ ಕಾಲ ಮುಚ್ಚಿದ್ದ ನಂತರ, ಮೇ 2, 2025 ರಂದು ಭಕ್ತರಿಗೆ ಮತ್ತೆ ಬಾಗಿಲು ತೆರೆಯಲಿದೆ. ಈ ದೇವಾಲಯವು ಅತ್ಯಂತ ಪವಿತ್ರ ಹಿಂದೂ ಯಾತ್ರಾ ಸ್ಥಳಗಳಲ್ಲಿ ಒಂದಾಗಿದ್ದು, ಇದು ಚಾರ್ ಧಾಮ್ ಯಾತ್ರೆಯ ಭಾಗವಾಗಿದೆ. ಪ್ರತಿ ವರ್ಷ ಸಾವಿರಾರು ಭಕ್ತರು ಇಲ್ಲಿ ಯಾತ್ರೆ ಮಾಡಲು ಬರುತ್ತಾರೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಕೇದಾರನಾಥ 11,968 ಅಡಿ ಎತ್ತರದಲ್ಲಿದೆ. ಇದು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ನೀವು ಈ ಬಾರಿ ಕೇದಾರನಾಥಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದರೆ, ಈ ಬಾರಿ ಕೇದಾರನಾಥ ಧಾಮದಲ್ಲಿ ರೀಲ್ಗಳು/ವಿಡಿಯೋಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು, ಮೊಬೈಲ್ಗಳು ಮತ್ತು ಕ್ಯಾಮೆರಾಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎನ್ನುವ ಬಗ್ಗೆ ನಿಮಗೆ ಗೊತ್ತಿದ್ರೆ ಉತ್ತಮ.