‘ಅಮೃತಧಾರೆ’ ಧಾರಾವಾಹಿಯ ಮಲ್ಲಿಯಿಂದ ಭಾರ್ಗವಿ ಎಲ್ಎಲ್ಬಿ ಆಗಿ ಜನಪ್ರಿಯರಾಗಿರುವ ನಟಿ ರಾಧಾ ಭಗವತಿ, ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ವೇದಿಕೆಯಲ್ಲಿ ತಮ್ಮ ಹಿಂದಿನ ಬಡತನದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಗಾಯಕಿಯಾಗಲು ಬಂದು ನಟಿಯಾಗಿ ಯಶಸ್ಸು ಕಂಡ ತಮ್ಮ ನೋವಿನ ಹಾದಿ ತಿಳಿಸಿದ್ದಾರೆ.
ಅಕ್ಕವ್ರೇ ಅಕ್ಕವ್ರೇ ಎಂದು ಅಮೃತಧಾರೆಯ ಭೂಮಿಕಾ ಹಿಂದೆ ಮುಂದೆ ಓಡಾಡ್ತಿದ್ದ ಮಲ್ಲಿ ಭಾರ್ಗವಿ ಎಲ್ಎಲ್ಬಿ ಆಗಿ ಹಲವು ತಿಂಗಳುಗಳೇ ಕಳೆದಿವೆ. ಮಾವನ ವಿರುದ್ಧವೇ ಸಿಡಿದೆದ್ದು ಹೆಣ್ಣೊಬ್ಬಳಿಗೆ ನ್ಯಾಯ ಕೊಡಿಸುವ ಪಾತ್ರದಲ್ಲಿ, ಭಾರ್ಗವಿ ಆಗಿ ಎಲ್ಲರ ಮನಸ್ಸನ್ನು ಗೆಲ್ಲುತ್ತಿರುವವರು ನಟಿ ರಾಧಾ ಭಗವತಿ (Radha Bagavathi).
27
ವಿಭಿನ್ನ ಕ್ಯಾರೆಕ್ಟರ್ಗಳಲ್ಲಿಯೂ ಸೈ
ಅಲ್ಲಿ ಮಲ್ಲಿಯಾಗಿ, ಇಲ್ಲಿ ಭಾರ್ಗವಿಯಲ್ಲಿ ಎರಡೂ ವಿಭಿನ್ನ, ತದ್ವಿರುದ್ಧ ಕ್ಯಾರೆಕ್ಟರ್ನಲ್ಲಿ ನಟಿಸಿ ಎರಡರಲ್ಲಿಯೂ ಸೈ ಎನ್ನಿಸಿಕೊಂಡಿರುವ ನಟಿ ರಾಧಾ ಭಗವತಿ, ಭಾರ್ಗವಿಯಾಗಿ ಹವಾ ಸೃಷ್ಟಿಸುತ್ತಿದ್ದಾರೆ. ಇದಾಗಲೇ ಇವರ ನಟನೆಯ ಅಪಾಯವಿದೆ ಎಚ್ಚರಿಕೆ ಸಿನಿಮಾ ಕೂಡ ರಿಲೀಸ್ ಆಗಿದೆ.
37
ಕಿರುತೆರೆ, ಹಿರಿತೆಯಲ್ಲಿ ಮಿಂಚಿಂಗ್
ಅಂದಹಾಗೆ ರಾಧಾ ಭಗವತಿ ಅವರು, ರಾಮ್ಜಿ ನಿರ್ದೇಶನದ ‘ರಾಮಾಚಾರಿ’ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಿರುತೆರೆಯಿಂದ ಕಳೆದ ವರ್ಷ ರಿಲೀಸ್ ಆದ ವಸಂತಕಾಲದ ಹೂವುಗಳು ಚಿತ್ರದಲ್ಲಿ ಇವರು ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟರು. ವಿಜಯಪುರದ ರಾಧಾ ಅವರು, ಈ ಚಿತ್ರದಲ್ಲಿ ಸುಮಾ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಾದ ಬಳಿಕ ಈಗ ಮತ್ತೆ ಕಿರುತೆರೆಗೆ ಪ್ರವೇಶ ಪಡೆದು ಅಮೃತಧಾರೆಯಲ್ಲಿ ನಟಿಸಿದರು. ಮಾಡೆಲ್ ಕೂಡ ಆಗಿರುವ ಇವರಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುವ ಆಸೆ ಎಂದಿದ್ದಾರೆ. ಎಂಥ ಪಾತ್ರ ಕೊಟ್ಟರೂ ಸಲೀಸಾಗಿ ಮಾಡುವ ಇವರಿಗೆ ಉಜ್ವಲ ಭವಿಷ್ಯವಿದೆ ಎನ್ನುವುದು ಸಿನಿ ಪ್ರಿಯರ ಅಭಿಮತ.
ಇದೀಗ ಅವರು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ನಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದು, ಈ ಕ್ಷಣದಲ್ಲಿ ಅವರು ತಮ್ಮ ಹಿಂದಿನ ದಿನಗಳನ್ನು ನೆನೆದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಸೋಜಿಗದ ಸೂಜಿ ಮಲ್ಲಿಗೆ ಹಾಡು ಹೇಳಿದ ರಾಧಾ, ನಾನು ಗಾಯಕಿಯಾಗಲು ಈ ಇಂಡಸ್ಟ್ರಿಗೆ ಬಂದೆ. ಆದರೆ ಇದೀಗ ಇಷ್ಟು ದೊಡ್ಡ ಮಟ್ಟದಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದೇನೆ ಎಂದು ಭಾವುಕರಾದರು.
57
ಹೂವು ಮಾರಿದ ದಿನ ನೆನೆದ ನಟಿ
ಇದೇ ವೇಳೆ ಬಡತನದ ದಿನಗಳನ್ನು ನೆನಪಿಸಿಕೊಂಡ ಅವರು, ಮನೆಯಲ್ಲಿ ತುಂಬಾ ಬಡತನವಿತ್ತು. ದುಡ್ಡು ಇಲ್ಲದೇ ಹೂವನ್ನು ಮಾರಿದ್ದೇನೆ ಎಂದು ನೆನೆದು ವೇದಿಕೆಯ ಮೇಲೆ ಬಿಕ್ಕಿ ಬಿಕ್ಕಿ ಅತ್ತರು. ಇವರ ನೋವಿನ ಹಿನ್ನೆಲೆ ಕೇಳಿ ಅಲ್ಲಿದ್ದ ಕಲಾವಿದೆಯರು ಕೂಡ ಕಣ್ಣೀರು ಹಾಕಿದರು. ಇದರ ಪ್ರೊಮೋ ಅನ್ನು ಕಲರ್ಸ್ ಕನ್ನಡ ಶೇರ್ ಮಾಡಿಕೊಂಡಿದೆ.
67
ರಾಧಾ ಅವರ ಬಣ್ಣದ ಲೋಕ
ಅಂದಹಾಗೆ, ರಾಧಾ ಅವರು ನಟಿ ರಾಧಾ ಭಗವತಿ ಅವರು ‘ಆ 90 ದಿನಗಳು’, ‘ವಸಂತ ಕಾಲದ ಹೂಗಳು’, ‘ಅಪಾಯವಿದೆ ಎಚ್ಚರಿಕೆ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿಯೂ ನಟಿಸಿದ್ದರು. ಇನ್ನು ‘ಬಾನಿಗೊಂದು ತಾರೆ’ ಮ್ಯೂಸಿಕ್ ವಿಡಿಯೋದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ 'ಅಪಾಯವಿದೆ ಎಚ್ಚರಿಕೆ' ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಎಸ್. ನಾರಾಯಣ್ ನಿರ್ದೇಶನದ 'ಒಂದ್ಸಲ ಮೀಟ್ ಮಾಡೋಣ' ಸಿನಿಮಾದಲ್ಲಿ ನಾಯಕನ ತಂಗಿಯಾಗಿ ನಟಿಸುತ್ತಿದ್ದಾರೆ. ಸದ್ಯ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ.
77
ಕಲಾವಿದರ ಕುಟುಂಬ
ರಾಧಾ ಅವರ ಕುಟುಂಬದವೇ ಕಲಾವಿದರ ಕುಟುಂಬ. ಇವರ ಅಜ್ಜ ರಂಗಭೂಮಿ ಕಲಾವಿದರು. ಇದರ ಜೊತೆಗೆ ಸವರು ಹರಿಕಥೆ ದಾಸರೂ ಕೂಡಾ ಆಗಿದ್ದರು. ರಾಧಾ ಅವರ ತಾಯಿಯೂ ಜನಪದ ಗೀತೆಗಳಿಗೆ ದನಿಯಾದವರು. ಮನೆಯಲ್ಲಿ ಕಲೆಯ ವಾತಾವರಣವಿದ್ದ ಕಾರಣದಿಂದಲೋ ಏನೋ ರಾಧಾ ಭಗವತಿ ಅವರಿಗೆ ನಟನೆಯತ್ತ ಎಳೆ ವಯಸ್ಸಿನಲ್ಲಿಯೇ ಆಸಕ್ತಿ ಮೂಡಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.