ಮಂತ್ರಾಲಯಕ್ಕೆ ತೆರಳಿ ರಾಘವೇಂದ್ರ ಆಶೀರ್ವಾದ ಪಡೆದ ಸೋನು ಗೌಡ: ರಾಯರು ನಿನಗೆ ಒಳ್ಳೆ ಬುದ್ದಿ ಕೊಡಲಿ ಎಂದ ಫ್ಯಾನ್ಸ್‌!

First Published Mar 11, 2024, 12:31 PM IST

ನೂರಾರು ಬಗೆಯ ರೀಲ್ಸ್ ಮಾಡುವ ಮೂಲಕ ಮನೆಮಾತಾಗಿರುವ ಸೋನು ಗೌಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಮಂತ್ರಾಲಯಕ್ಕೆ ತೆರಳಿ ರಾಯರ ಆಶೀರ್ವಾದ ಪಡೆದಿದ್ದಾರೆ.

ಬಿಗ್ ಬಾಸ್ ಒಟಿಟಿ​ ಸ್ಪರ್ಧಿಯಾಗಿದ್ದ ಸೋನು ಗೌಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಫೋಟೋ ವಿಡಿಯೋಗಳನ್ನು ಹಂಚಿಕೊಳ್ತಾರೆ.

ಸೋನು ಶ್ರೀನಿವಾಸ್​ ಗೌಡ ಮಂತ್ರಾಲಯ ಗುರು ರಾಯರ ದರ್ಶನ ಪಡೆದು ಬಂದಿದ್ದಾರೆ. ದೇವರ ದರ್ಶನ ಪಡೆದ ಬಳಿಕ ಸೋನು ಗೌಡ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಅವರ ಜೊತೆ ಪುಟಾಣಿ ಸೇವಂತಿ ಕೂಡ ಸಾಥ್​ ನೀಡಿದ್ದಾಳೆ. ದೇವರ ಮೇಲೆ ಸೋನು ಗೌಡ ಅವರಿಗೆ ಇರುವ ಭಕ್ತಿ ನೋಡಿ ನೆಟ್ಟಿಗರಿಗೆ ಅಚ್ಚರಿ ಆಗಿದೆ.

ಸೋನು ಶ್ರೀನಿವಾಸ್ ಗೌಡಗೆ ನೆಟ್ಟಿಗರು, ಆ ದೇವರು ನಿಮಗೆ ಒಳ್ಳೇದೇ ಮಾಡ್ಲಿ, ರಾಯರೆ ಇನ್ನು ಮುಂದೆ ಆದ್ರು ಇವಳಿಗೆ ಒಳ್ಳೆ ಬುದ್ದಿ ಕೊಡಿ. ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.

ಟಿಕ್ ಟಾಕ್ , ರೀಲ್ಸ್ ಮೂಲಕ ಫೇಮಸ್ ಆಗಿರೋ ಸೋನು ಶ್ರೀನಿವಾಸ್, ಬಿಗ್ ಬಾಸ್ ಮನೆಯಲ್ಲಿ ತಮ್ಮ ಖಾಸಗಿ ಬದುಕಿನಲ್ಲಿ ನಡೆದ ಕಹಿ ಘಟನೆಯನ್ನು ಹಂಚಿಕೊಂಡು ಕಣ್ಣೀರು ಹಾಕಿದ್ರು.

ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಭಾರೀ ವೈರಲ್ ಆಗಿತ್ತು. ಇದ್ರಿಂದಲೇ ಸೋನು ಗೌಡ ಸಖತ್ ಟ್ರೋಲ್ ಆಗಿದ್ರು.

ಸೋನು ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ವೆಕೇಷನ್, ಟ್ರಿಪ್ ಸೇರಿದಂತೆ ಹಲವಾರು ಕಂಟೆಂಟ್​ಗಳನ್ನು ನಟಿ ಶೇರ್ ಮಾಡುತ್ತಲೇ ಇರುತ್ತಾರೆ.

click me!