ಹಾಗಾಗಿ, ಶಿಶಿರ್ ಈ ವಾರ ಟಾಸ್ಕ್ಗಳಿಂದ ಹೊರಬೀಳುವ ಸಾಧ್ಯತೆಗಳಿದ್ದು, ಅದು ಅವರ ನಾಮಿನೇಷನ್ಸ್ ಮೇಲೆ ಪರಿಣಾಮ ಬೀಳಲಿದೆ. ವಿಚಾರ ತಿಳಿದು ಕೋಪಗೊಂಡ ಶಿಶಿರ್ ನಾನೇನು ಕಡ್ಲೆಪುರಿ ತಿಂತಿದ್ನಾ ಇಷ್ಟು ದಿನ . ತ್ರಿವಿಕ್ರಮ್ ಅವರು ದೈಹಿಕವಾಗಿ ಮಾನಸಿಕವಾಗಿ ಬಹಳ ಗಟ್ಟಿಯಾಗಿದ್ದಾರೆ ಎಂದು ಚೈತ್ರಾ ತಮ್ಮ ಕಾರಣ ಒದಗಿಸಿದ್ದಾರೆ. ಮಾನಸಿಕ ಅನ್ನೋ ಕಾರಣ ಕೊಡ್ತಾರೆ, ಇಷ್ಟು ದಿನ ಮಾನಸಿಕ ಏನಾಗಿತ್ತು?, ನಾಮಿನೇಷನ್ ಅಂತಾ ಬಂದಾಗ ಅಯ್ಯೋ ಅಮ್ಮಾ ಅಂತಾ ಹೇಳಿಬಿಡ್ತಾರೆ. 12 ವರ್ಷಗಳಿಂದ ನಟಿಸುತ್ತಾ ಬಂದಿರೋ ನಾವಲ್ಲ ಕಲಾವಿದರು. ಇಲ್ಲಿ ಇದ್ದಾರೆ ನೋಡಿ ನಿಜವಾದ ಆ್ಯಕ್ಟರ್ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.