'ಜಗದ್ಧಾತ್ರಿ'ಯಾಗಿ ನಟಿ ಮೋಕ್ಷಿತಾ ಪೈ ಎಂಟ್ರಿ! ಕ್ರೈಂ ಬ್ರ್ಯಾಂಚ್​ ಆಫೀಸರ್​- ಏನಿದು ಸ್ಟೋರಿ? ನಾಯಕ ಯಾರು?

Published : Feb 11, 2026, 06:21 PM IST

ಬಿಗ್‌ಬಾಸ್ ಹಾಗೂ 'ಪಾರು' ಖ್ಯಾತಿಯ ಮೋಕ್ಷಿತಾ ಪೈ ಇದೀಗ 'ಜಗದ್ಧಾತ್ರಿ' ಎಂಬ ಹೊಸ ಧಾರಾವಾಹಿಯ ಮೂಲಕ ಜೀ ಕನ್ನಡಕ್ಕೆ ಮರಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅವರು ಕ್ರೈಂ ಬ್ರ್ಯಾಂಚ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇದು ತೆಲುಗಿನ ಜನಪ್ರಿಯ ಸೀರಿಯಲ್‌ನ ರಿಮೇಕ್ ಆಗಿದೆ. ನಟ ಯಾರು? 

PREV
16
ಬಿಗ್​ಬಾಸ್​​ ಖ್ಯಾತಿಯ ಮೋಕ್ಷಿತಾ ಪೈ

ಬಿಗ್​ಬಾಸ್​​ ಖ್ಯಾತಿಯ ಮೋಕ್ಷಿತಾ ಪೈ (Mokshitha Pai) ಸಹಜವಾಗಿ ಬಿಗ್​ಬಾಸ್​ ಮನೆಯಿಂದ ಹೊರಕ್ಕೆ ಬಂದ ಮೇಲೆ ಫೇಮಸ್​ ಆಗಿದ್ದಾರೆ. ಬಿಗ್‌ಬಾಸ್‌ನಲ್ಲಿ ತಮ್ಮ ಮುಗ್ಧ ಮುಖದಿಂದ, ಅಷ್ಟೇ ಸಾಫ್ಟ್‌ ಆಗಿ ಇರುವಲ್ಲಿ ನಟಿ ಮೋಕ್ಷಿತಾ ಪೈ ಎಲ್ಲರ ಮನಸ್ಸನ್ನು ಗೆದ್ದವರು. 3ನೇ ರನ್ನರ್‌ ಅಪ್‌ ಅರ್ಥಾತ್‌ 4ನೇ ಸ್ಥಾನ ಪಡೆದಿದ್ದಾರೆ ನಟಿ.

26
ಪಾರು ಆಗಿ ಮನಸ್ಸನ್ನು ಗೆದ್ದವರು

ಬಿಗ್‌ಬಾಸ್‌ಗೂ ಮುನ್ನ ಪಾರು ಸೀರಿಯಲ್‌ನ ನಟನೆಯಿಂದ ಮನೆ ಮಾತಾಗಿದ್ದವರು ಈಕೆ. ಇದರಲ್ಲಿ ಹಳ್ಳಿ ಹುಡುಗಿ ಪಾರು ಆಗಿ, ಕರುನಾಡಿನ ವೀಕ್ಷಕರ ಮನ ಗೆದ್ದಿದ್ದರು, ಮೋಕ್ಷಿತಾ ಅನ್ನೋದಕ್ಕಿಂತ ಪಾರು ಆಗಿ, ಅಖಿಲಾಂಡೇಶ್ವರಿ ಸೊಸೆಯಾಗಿ ಗುರುತಿಸಿಕೊಂಡಿದ್ದರು ನಟಿ. ಐದು ವರ್ಷಗಳಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ಧಾರಾವಾಹಿ ಪಾರು (Paaru) ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.

36
ವೆಬ್​ಸೀರಿಸ್​ನಲ್ಲಿ ನಟನೆ

ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಧನುಷ್ ಗೌಡ ನಿರ್ದೇಶನ ಮಾಡಿರುವ ಮಿಡಲ್ ಕ್ಲಾಸ್ ರಾಮಾಯಣ ಸಿನಿಮಾದಲ್ಲಿ ನಟಿಸಿದ್ದರು. ಅಷ್ಟೇ ಅಲ್ಲದೇ ವಿನಯ್ ಗೌಡ ಜೊತೆ ಒಂದು ಮಿನಿ ವೆಬ್ ಸೀರೀಸ್ ನಲ್ಲೂ ಕಾಣಿಸಿಕೊಂಡಿದ್ದರು. ಬಳಿಕ ಈ ಬಾರಿಯ ಬಿಗ್​ಬಾಸ್​ಗೆ ವಿಶೇಷ ಅತಿಥಿಯಾಗಿಯೂ ಎಂಟ್ರಿ ಕೊಟ್ಟಿದ್ದರು.

46
ಜಗದ್ಧಾತ್ರಿಯಾಗಿ ನಟಿ

ಇದೀಗ ಮೋಕ್ಷಿತಾ ಪೈ ಜೀ ಕನ್ನಡಕ್ಕೆ ವಾಪಸಾಗಿದ್ದಾರೆ. ಜಗದ್ಧಾತ್ರಿ ಸೀರಿಯಲ್​ನಲ್ಲಿ ಅವರು ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಅವರು ಕ್ರೈಂ ಬ್ರ್ಯಾಂಚ್​ ಆಫೀಸರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

56
ತೆಲುಗು ಸೀರಿಯಲ್​ ರೀಮೇಕ್​

ಸದ್ಯ ಸಿಕ್ಕಿರುವ ಮಾಹಿತಿಯ ಈ ಸೀರಿಯಲ್​ ತೆಲುಗಿನ ಜನಪ್ರಿಯ ಧಾರಾವಾಹಿ ಜಗಧಾತ್ರಿಯ ರಿಮೇಕ್ ಆಗಿದೆ. ಈ ಧಾರಾವಾಹಿಯ ಮೂಲ ಮರಾಠಿ ಧಾರಾವಾಹಿ ಇದು ಹೌಸ್ ವೈಫ್ ಆಗಿ ಗುರುತಿಸಿಕೊಂಡಿರುವ ಸ್ಪೈ ಏಜೆಂಟ್ ಕಥೆಯಾಗಿದೆ.

66
ದೀಪಕ್​ ಗೌಡ ನಾಯಕ

ಮಾಹಿತಿಯ ಪ್ರಕಾರ ನಾಯಕನಾಗಿ ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ನಮ್ಮನೆ ಯುವರಾಣಿ’ ನಾಯಕ ಹಾಗೂ ವೀಕ್ಷಕರ ಮೆಚ್ಚಿನ ಅನಿಕೇತ್ ಖ್ಯಾತಿಯ ದೀಪಕ್ ಗೌಡ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ದೀಪಕ್ ಗೌಡ ಅವರು ‘ನಮ್ಮನೆ ಯುವರಾಣಿ’ ಧಾರಾವಾಹಿಯಲ್ಲಿ ಅನಿಕೇತ್ ಆಗಿ ಜನಮನ ಗೆದ್ದಿದ್ದರು. ಅವರ ಸ್ಟೈಲ್, ಸ್ಮೈಲ್, ನಟನೆ, ಅನಿಕೇತ್-ಮೀರಾ ಜೋಡಿಯನ್ನು ಜನ ಇಷ್ಟಪಟ್ಟಿದ್ದರು. ಅದಾದ ಬಳಿಕ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ತುಳಸಿ ಮಗನಾಗಿ ನಟಿಸಿದ್ದರು. ಆದರೆ ಆ ಧಾರಾವಾಹಿಯಿಂದ ಅರ್ಧದಲ್ಲೇ ನಟ ಹೊರಗೆ ಬಂದಿದ್ದರು. ಇದೀಗ ಮತ್ತೆ ಕಿರುತೆರೆಗೆ ಹಲವು ವರ್ಷಗಳ ಬಳಿಕ ಕಂ ಬ್ಯಾಕ್ ಮಾಡುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories