ಚೈತ್ರಾ ಕೋರ್ಟ್ ಕೇಸ್ ಹಿನ್ನೆಲೆ ಏನು?
ಚೈತ್ರಾ ಕುಂದಾಪುರ ಅವರು ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಪಡೆದು ವಂಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಸಂಗಡಿಗರು ಮನೆ ಕಟ್ಟಿಸಿಕೊಳ್ಳುವುದು, ಜಮೀನು ಖರೀದಿ, ಚಿನ್ನಾಭರಣ ಖರೀದಿ ಸೇರಿದಂತೆ ಮಾಡಿದ್ದರು. ಇದರ ಬೆನ್ನಲ್ಲಿಯೇ ಪೊಲೀಸರು ಚೈತ್ರಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ವಿಚಾರಣೆ ನಡೆಸಿ ಚಾರ್ಚ್ ಶೀಟ್ ಸಲ್ಲಿಕೆ ಮಾಡಿ ಜೈಲಿಗಟ್ಟಿದ್ದರು. ಜಾಮೀನಿನ ಮೇಲೆ ಹೊರಬಂದ ಚೈತ್ರಾ ಕುಂದಾಪುರ ಬಿಗ್ ಬಾಸ್ ರಿಯಾಲಿಟಿ ಶೋ ಸೀಸನ್ 11ಕ್ಕೆ ಸ್ಪರ್ಧಿಯಾಗಿ ಹೋಗಿದ್ದಾರೆ.