ತುಳುನಾಡ ದೈವಾರಾಧೆ ಸಂರಕ್ಷಣಾ ಯುವ ವೇದಿಕೆಯವರು ಮಂಗಳೂರು ನಗರ ಕಮಿಷನರ್ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಧಾರಾವಾಹಿ ಪ್ರಸಾರವಾಗದಂತೆ ತಡೆಹಿಡಯಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ದೈವಾರಾಧನೆ ನಮ್ಮ ಸಮಾಜದ ಕರ್ತವ್ಯ. ಸೀಮಿತ ಸಮಾಜದವರು ಮಾತ್ರ ದೈವ ನರ್ತನ ಮಾಡಬೇಕು. ಈ ರೀತಿಯ ಘಟನೆಗಳಿಂದ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಸಾಂಪ್ರಾದಾಯಿಕವಾಗಿ ದೈವ ನರ್ತನ ಸೇವೆ ನಡೆಯುವಲ್ಲಿಯೇ ಅದು ನಡೆಯಬೇಕು. ಸಿನೆಮಾ, ಧಾರವಾಹಿ, ವೇದಿಕೆಗಳಲ್ಲಿ ದೈವಾರಾಧನೆ ಪ್ರದರ್ಶನ ಸಲ್ಲದು ಎಂದಿದ್ದಾರೆ.