ಸದ್ಯ ಜಯಂತ್ ಮನೋವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ. ವೈದ್ಯರು ಎಷ್ಟೇ ಔಷಧಿ ಕೊಟ್ಟರೂ, ಸಮಾಧಾನ ಹೇಳಿದರೂ "ನನ್ನ ಜಾನು ಸತ್ತಿಲ್ಲ, ಬದುಕಿದ್ದಾಳೆ" ಎಂದು ಪದೇ ಪದೇ ಹೇಳುತ್ತಿದ್ದಾನೆ ಜಯಂತ್. ಇದನ್ನೆಲ್ಲಾ ನೋಡಿದ ವೈದ್ಯರು ಜಯಂತ್ ಜಾಹ್ನವಿ ಇದ್ದಾಳೆ ಎಂಬ ಭ್ರಮೆಯಲ್ಲಿ ಬದುಕುತ್ತಿದ್ದಾನೆ ಎಂದು ಹೇಳುತ್ತಾರೆ. ಈ ವಿಷಯ ಈಗ ವಿಶ್ವ, ಜಾಹ್ನವಿಗೂ ತಿಳಿದಿದೆ.