ನಿತಿನ್ ಜೊತೆಗಿನ ಪ್ರೇಮ ಪಯಣದ ಗುಟ್ಟು ಹಂಚಿಕೊಂಡ ಸರಿಗಮಪ ಶೋ ಗಾಯಕಿ ಸುಹಾನಾ ಸೈಯದ್

Published : Sep 21, 2025, 05:28 PM IST

 'ಸರಿಗಮಪ' ವೇದಿಕೆಯಲ್ಲಿ ಸಂಚಲನ ಸೃಷ್ಟಿಸಿದ್ದ ಗಾಯಕಿ ಸುಹಾನಾ ಸೈಯದ್, ಇದೀಗ ತಮ್ಮ ಪ್ರೀತಿಯ ವಿಷಯವನ್ನು ಬಹಿರಂಗಪಡಿಸಿದ್ದಾರೆ. ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರೊಂದಿಗೆ ತಮ್ಮ ಮುಂದಿನ ಜೀವನವನ್ನು ಕಳೆಯುವ ನಿರ್ಧಾರವನ್ನು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

PREV
15
ಸುಹಾನಾ ಸೈಯದ್

ಉಪೇಂದ್ರ ಮತ್ತು ಸುದೀಪ್ ಅಭಿನಯದ ಚಿತ್ರದ ಮುಕುಂದು ಮುರಾರಿಯ ನೀನೇ ರಾಮಾ, ನೀನೇ ಅಲ್ಲಾ, ನೀನೇ ಯೇಸು ಎಂದು ಹಾಡು ಹೇಳಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಗಾಯಕಿ ಸುಹಾನಾ ಸೈಯದ್. ಬುರ್ಕಾ ಹಾಕಿ ಈ ಹಾಡು ಹೇಳಿದ್ದರಿಂದ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹಿನ್ನೆಲೆ ಗಾಯಕಿಯಾಗಿರುವ ಸುಹಾನಾ ಸೈಯದ್ ಇದೀಗ ತಮ್ಮ ಪ್ರೀತಿ ವಿಷಯವನ್ನು ಹಂಚಿಕೊಂಡಿದ್ದಾರೆ.

25
ನಿತಿನ್ ಶಿವಾಂಶ್ ಜೊತೆ ಪ್ರೀತಿ

ರಂಗಭೂಮಿ ಕಲಾವಿದರಾಗಿರುವ ನಿತಿನ್ ಶಿವಾಂಶ್ ಜೊತೆ ತಮ್ಮ ಮುಂದಿನ ಜೀವನವನ್ನು ಕಳೆಯುವ ನಿರ್ಧಾರವನ್ನು ಸುಹಾನಾ ಸೈಯದ್ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪ್ರೀತಿಯ ವಿಷಯವನ್ನು ಸುಹಾನಾ ಮುಕ್ತವಾಗಿ ಹಂಚಿಕೊಂಡಿದ್ದಾರೆ. ನಿತಿನ್ ಶಿವಾಂಶ್ ಅವರ ನೀನಾಸಂನಿಂದ ತರಬೇತಿ ಪಡೆದ ಕಲಾವಿದರಾಗಿದ್ದಾರೆ.

35
ನಿಮ್ಮ ಆಶೀರ್ವಾದವಿರಲಿ

ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ. ಪ್ರೇಮಕ್ಕೆ ಯಾವ ಮಿತಿ ಇಲ್ಲ, ಎಂಬುದಕ್ಕೆ ನಾವೇ ಸಾಕ್ಷಿ. ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ನಿಮ್ಮ ಆಶೀರ್ವಾದವಿರಲಿ ಎಂದು ಸುಹಾನಾ ಬರೆದುಕೊಂಡಿದ್ದಾರೆ.

45
ಸರಿಗಮಪ ಸೀಸನ್ 13

ಸರಿಗಮಪ ಸೀಸನ್ 13ರ ಮೆಗಾ ಆಡಿಷನ್‌ನಲ್ಲಿ ಸುಹಾನಾ ಸೈಯ್ಯದ್ "ಶ್ರೀಕಾರನೇ" ಎಂಬ ಹಾಡು ಹೇಳಿದ್ದರು. ಬುರ್ಖಾ ಧರಿಸಿದ್ದ ಮುಸ್ಲಿಂ ಮಹಿಳೆ ಹಿಂದೂ ಅಥವಾ ಧಾರ್ಮಿಕ ಗೀತೆಗಳನ್ನು ಹಾಡಬಹುದಾದ ಎಂಬ ಚರ್ಚೆಗಳು ನಡೆದಿದ್ದವು. ನಂತರ "ನೀನೇ ರಾಮ, ಅಲ್ಲಾ, ಯೇಸು" ಎಂಬ ಹಾಡು ಹೇಳಿ ಸುಹಾನಾ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು.

ಇದನ್ನೂ ಓದಿ: 25 ಥಿಯೇಟರ್‌ನಲ್ಲಿ ಬಿಡುಗಡೆ; ಸಿನಿಮಾ ನೋಡಿದವರು ತಿಂಗಳುಗಟ್ಟಲೇ ನಿದ್ದೆ ಮಾಡಲಿಲ್ಲ!

55
ಸುಹಾನ ಸ್ಪಷ್ಟನೆ

ತಮ್ಮ ಕುರಿತ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಸುಹಾನಾ, ನಾನು ಇಲ್ಲಿ ಹಾಡಲು ಬಂದಿದ್ದೇನೆ. ನನಗೆ ಪ್ರತಿಭೆ ಇರೋದರಿಂದ ನನ್ನನ್ನು ಆಯ್ಕೆ ಮಾಡಲಾಗಿದೆ. ಹಾಡು ಹಾಡುತ್ತಾ ಸಂಗೀತ ಕಲಿಯಲು ಈ ವೇದಿಕೆ ಬಂದಿದ್ದೇನೆ ಎಂದು ಹೇಳಿದ್ದರು. ಸುಹಾನಾ ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಸುಹಾನಾ ಯಕ್ಷಗಾನ ಕಲಾವಿದೆಯೂ ಆಗಿದ್ದಾರೆ.

ಇದನ್ನೂ ಓದಿ: ಟ್ವಿಸ್ಟ್ ಅಂದ್ರೆ ಇದು ನೋಡಿ: ವೀರಭದ್ರನ ಕುತಂತ್ರದ ಕತ್ತಲಲ್ಲಿ ಮುಳುಗಿದ ಮಾರಿಗುಡಿಗೆ ಸಾಕ್ಷಾತ್ಕಾರ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories