Karna Serial: ಮೂತಿ ಸೊಟ್ಟ ಮಾಡಿದ್ರೂ ಅರ್ಜುನ್​ಗೆ ಇಷ್ಟವಾಗಿಬಿಟ್ಟಳು ನಿಧಿ; ಕರ್ಣನ ಲವ್​ಸ್ಟೋರಿ ಭವಿಷ್ಯ ಏನು

Published : Apr 15, 2026, 10:49 PM IST

ಕರ್ಣ ಮತ್ತು ನಿಧಿಯನ್ನು ಬೇರೆ ಮಾಡಲು ರಮೇಶ್ ಮಾಡಿದ ಪ್ಲ್ಯಾನ್ ಯಶಸ್ವಿಯಾಗಿದ್ದು, ನಿಧಿಯನ್ನು ಮದುವೆಯಾಗಲು ಬಂದ ಹ್ಯಾಂಡ್​ಸಮ್​ ಡಾಕ್ಟರ್ ಅರ್ಜುನ್, ನಿಧಿಯನ್ನು ಒಪ್ಪಿಕೊಂಡಿದ್ದಾನೆ. ಇದರಿಂದಾಗಿ ತಮ್ಮ ಪ್ರೀತಿಯನ್ನು ಹೇಳಿಕೊಳ್ಳಲಾಗದೆ ಕರ್ಣ ಮತ್ತು ನಿಧಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

PREV
16
ಕುತೂಹಲದ ಹಂತ

ಕರ್ಣ ಸೀರಿಯಲ್​ (Karna Serial) ಇದೀಗ ಕುತೂಹಲದ ಹಂತ ತಲುಪಿದೆ. ಕರ್ಣ ಮತ್ತು ನಿಧಿಯನ್ನು ದೂರ ಮಾಡಲು ರಮೇಶ್​ ಇನ್ನಿಲ್ಲದಂತೆ ಪ್ಲ್ಯಾನ್​ ಮಾಡುತ್ತಿದ್ದಾನೆ.

26
ಹುಡುಗ ಬಂದ

ಅದರ ಭಾಗವಾಗಿ ನಿಧಿಗೆ ಬೇರೆ ಮದುವೆ ಮಾಡಲು ಹುಡುಗನನ್ನು ನೋಡಿದ್ದಾನೆ. ಹುಡುಗ ಬಂದಾಗ ಆತನನ್ನು ಹೇಗಾದರೂ ಓಡಿಸಬಹುದು ಎಂದು ಕರ್ಣ ಮತ್ತು ನಿಧಿ ಪ್ಲ್ಯಾನ್​ ಮಾಡಿ ಇದಕ್ಕೆ ಒಪ್ಪಿದ್ದರು.

36
ಹ್ಯಾಂಡ್​ಸಮ್​ ಅರ್ಜುನ್​

ಆದರೆ ಆಗಿದ್ದೇ ಬೇರೆ. ಅಲ್ಲಿ ಬಂದವ ಹ್ಯಾಂಡ್​ಸಮ್​ ಅರ್ಜುನ್​. ಅರ್ಜುನ ಒಬ್ಬ ಡಾಕ್ಟರ್​, ಹಾರ್ಟ್​ ಸರ್ಜನ್​. ಸಿಕ್ಕಾಪಟ್ಟೆಯ ಒಳ್ಳೆಯ ಯುವಕ. ಅವನು ಬಂದವನೇ ನಿಧಿಯನ್ನು ನೋಡಿದ್ದಾನೆ.

46
ಎಲ್ಲರಿಗೂ ಇಷ್ಟ

ಅರ್ಜುನ್ ಎಲ್ಲರಿಗೂ ಇಷ್ಟ ಆಗಿಬಿಟ್ಟಿದ್ದಾನೆ. ಅವನು ತನ್ನನ್ನು ಒಪ್ಪಿಕೊಳ್ಳಬಾರದು ಎಂದು ನಿಧಿ ಸೊಟ್ಟ ಮೂತಿ ಮಾಡಿ ಬಂದಿದ್ದಾಳೆ.

56
ಸೊಟ್ಟ ಮೂತಿ ನಿಧಿ

ಆದರೂ ಕರ್ಣ ನಿಧಿಯನ್ನು ಒಪ್ಪಿಕೊಂಡು ಬಿಟ್ಟಿದ್ದಾನೆ. ಎಲ್ಲರಿಗೂ ಖುಷಿಯೋ ಖುಷಿ. ನಿಧಿ ಮತ್ತು ಕರ್ಣ ಮಾತ್ರ ಇಂಗು ತಿಂದ ಮಂಗನಂತಾಗಿದ್ದರೆ, ತನ್ನ ಪ್ಲ್ಯಾನ್​ ಸಕ್ಸಸ್​ ಆಗಿರೋ ಖುಷಿಯಲ್ಲಿ ಇದ್ದಾನೆ ರಮೇಶ್​.

66
ಮುಂದೇನು?

ಈಗೇನಿದ್ದರೂ ನಿಧಿ ಮತ್ತು ಕರ್ಣ ತಮ್ಮ ಲವ್​ಸ್ಟೋರಿಯನ್ನು ಎಲ್ಲರ ಎದುರು ಹೇಳಲೇಬೇಕಿದೆ. ಅದಕ್ಕೆ ಅವಕಾಶ ಸಿಗುತ್ತಾ ಎನ್ನುವುದು ಮುಂದಿರುವ ಪ್ರಶ್ನೆ. ಈಗ ಬಂದಿರುವ ಅರ್ಜುನ್​ನನ್ನು ನೋಡಿದರೆ, ಅವರಿಬ್ಬರೂ ತಮ್ಮ ಪ್ರೀತಿಯನ್ನು ಹೇಳಿಕೊಳ್ಳಲು ಇಷ್ಟು ಬೇಗ ಅವಕಾಶ ಸಿಗುವುದಿಲ್ಲ ಎಂದೇ ಅನ್ನಿಸುತ್ತಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories