ನಾ ನಿನ್ನ ಬಿಡಲಾರೆ ಸೀರಿಯಲ್ ಮತ್ತೊಮ್ಮೆ ರೋಚಕ ತಿರುವು ಪಡೆದುಕೊಂಡಿದೆ. ಶರತ್ಗೆ ಮಾಳವಿಕಾ ಮಲತಾಯಿ. ಶರತ್ ತಾಯಿ ದಾಕ್ಷಾಯಿಣಿ ನಿಧನದ ಬಳಿಕ ಜಗನ್ನಾಥ್ ಜೊತೆ ಮಾಳವಿಕಾ ಮದುವೆ ಆಗಿದೆ ಅಂತಾನೇ ಎಲ್ಲರೂ ತಿಳಿದುಕೊಂಡಿದ್ದರು. ಇಷ್ಟು ದಿನ ಅದೇ ರೀತಿಯಲ್ಲಿಯೇ ಕಥೆಯನ್ನು ತೋರಿಸಲಾಗಿತ್ತು.
25
ಶರತ್ ತಾಯಿ ದಾಕ್ಷಾಯಿಣಿ
ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಶರತ್ ತಾಯಿ ದಾಕ್ಷಾಯಿಣಿ ಬದುಕಿರೋದನ್ನು ತೋರಿಸಲಾಗಿದೆ. ನನ್ನ ವಿರುದ್ಧ ಮಾತನಾಡಿದವರಿಗೆ ಏನು ಮಾಡುತ್ತೇನೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ ಎಂದು ಮಾಯಾಗೆ ಮಾಳವಿಕಾ ತೋರಿಸಿದ್ದಾಳೆ. ಶರತ್ ತನ್ನನ್ನು ಮದುವೆಯಾಗಲಿಲ್ಲ ಎಂಬ ಹತಾಶೆಯಿಂದ ಮಾಳವಿಕಾ ವಿರುದ್ಧವೇ ಮಾತನಾಡಿದ್ದಾಳೆ.
35
ಮಾಳವಿಕಾ ಮೇಲೆಯೇ ಮಾಯಾ ಹಲ್ಲೆ
ಮಾಯಾಳ ನಡೆಯಿಂದ ಕೆಂಡವಾದ ಮಾಳವಿಕಾ, ಆಕೆಯನ್ನು ತನ್ನ ಮಾಯಾಲೋಕಕ್ಕೆ ಕರೆದುಕೊಂಡು ಬಂದಿದ್ದಾಳೆ. ಮಾಳವಿಕಾ ಮೇಲೆಯೇ ಮಾಯಾ ಹಲ್ಲೆ ಮಾಡಲು ಬಂದಿದ್ದಳು. ತನ್ನಲ್ಲಿರುವ ಮಾಂತ್ರಿಕ ಶಕ್ತಿಯಿಂದ ಮಾಯಾಳನ್ನು ತಡೆದ ಮಾಳವಿಕಾ, ಕಪಾಳಕ್ಕೆ ಎರಡು ಏಟು ಸಹ ನೀಡಿದ್ದಾಳೆ. ಮಾಳವಿಕಾ ಆಡಿಸೋ ಆಟದ ಗೊಂಬೆ ಅನ್ನೋ ವಿಷಯ ಮಾಯಾಗೆ ಗೊತ್ತಿಲ್ಲ.
ನಾ ನಿನ್ನ ಬಿಡಲಾರೆ ಸೀರಿಯಲ್ನಲ್ಲಿ ಆಗಾಗ ಮುಚ್ಚಿದ ಮಡಿಕೆಯನ್ನು ತೋರಿಸಲಾಗುತ್ತದೆ. ಈ ಮಡಿಕೆಯಲ್ಲಿ ಶಂಭು ತಾಯಿಯ ಆತ್ಮವಿದೆ ಎಂದು ತೋರಿಸಲಾಗಿದೆ. ಇನ್ನುಳಿದ ಎರಡು ಮಡಿಕೆಯಲ್ಲಿ ಹಿತಾ ಮತ್ತು ಅಂಬಿಕಾ ಆತ್ಮವನ್ನು ತುಂಬಿಸಿ ಅಮ್ಮನನ್ನು ಅಮರ ಮಾಡೋದು ಮಾಳವಿಕಾಳ ಉದ್ದೇಶವಾಗಿದೆ. ಇದಕ್ಕಾಗಿ ಈ ಹಿಂದೆ ಅಂಬಿಕಾಳ ಆತ್ಮವನ್ನು ಮಾಯಾ ಕನ್ನಡಿಯಲ್ಲಿ ಬಂಧಿಸಿಡಲಾಗಿತ್ತು. ಇದೀಗ ಅದೇ ರೀತಿ ಶರತ್ ತಾಯಿಯನ್ನು ಬಂಧಿಸಿಡಲಾಗಿದೆಯಾ ಎಂದು ವೀಕ್ಷಕರು ಕಮೆಂಟ್ ಮಾಡಿದ್ದಾರೆ.
ಈ ಪ್ರೋಮೋ ನೋಡಿದ ನೆಟ್ಟಿಗರು, ಓ ದೇವರೇ ಆ ಇನ್ನೊಂದು ಆತ್ಮ ಶಂಭು ಅವ್ರ ಹೆಂಡತಿ ದುರ್ಗಾ,ಅಂಬಿಕಾ ಅವ್ರ ಅಮ್ಮ ಅಂದುಕೊಂಡಿದ್ವಿ. ಆದರೆ ಇದು ಶರತ್ ಅಮ್ಮ ದಾಕ್ಷಾಯಣಿ. ಶಂಭು ಅಂಬಿಕಾ ಮುಂದೆ ದೆವ್ವಗಳ ಆಟ ಮಾಟ ಮಂತ್ರ ತಂತ್ರಗಾರಿಕೆ ನಡೆಯುವುದಿಲ್ಲ ಮಾಳವಿಕಾ ದುಷ್ಟ ಶಕ್ತಿಗಳ ಅಂತ್ಯ ಆಗಲೇಬೇಕು ಎಂದು ಕಮೆಂಟ್ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.