ಬಿಗ್ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ತಮ್ಮ ಬಿಗ್ಬಾಸ್ ಮನೆಯ ಪಯಣದ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಮೂರು ತಿಂಗಳ ಸಂತೋಷ, ನೋವು, ಮತ್ತು ಬಾಂಧವ್ಯಗಳನ್ನು ನೆನಪಿಸಿಕೊಂಡ ಅವರು, ಮನೆಯನ್ನು ಬಿಟ್ಟು ಬರುವ ಕ್ಷಣ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 12 ಮುಕ್ತಾಯವಾಗಿ 15 ದಿನಗಳು ಕಳೆದಿವೆ. ಸೀಸನ್ 12ರ ಮೊದಲ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ಇದೀಗ ತಮ್ಮ ಬಿಗ್ಬಾಸ್ ಪಯಣದ ಬಗ್ಗೆ ಸುಂದರವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ರಕ್ಷಿತಾ ಶೆಟ್ಟಿ ಹೇಳಿದ್ದೇನು ಅಂತ ನೋಡೋಣ ಬನ್ನಿ
25
ಮರೆತೇ ಹೋಗಲಾರದ ದಿನ
ನನ್ನ ಜೀವನದಲ್ಲಿ ಎಂದಿಗೂ ಮರೆತೇ ಹೋಗಲಾರದ ದಿನ – ಬಿಗ್ ಬಾಸ್ ಮನೆಯಲ್ಲಿನ ಕೊನೆಯ ದಿನ. ಮೂರು ತಿಂಗಳುಗಳ ಕಾಲ ಎಲ್ಲವೂ ಇತ್ತು. ಸಂತೋಷ, ಕಣ್ಣೀರು, ನೋವು, ಅಸೂಯೆ, ಪ್ರೀತಿ ಮತ್ತು ಬೆಳವಣಿಗೆ. ಸ್ಪರ್ಧೆಯಾಗಿ ಆರಂಭವಾದ ಈ ಮನೆ, ಸಮಯದೊಂದಿಗೆ ನಿಜವಾದ ಮನೆಯಾಗಿಬಿಟ್ಟಿತು. ಭಾವನೆಗಳು, ಬಾಂಧವ್ಯ ಮತ್ತು ಅನೇಕ ನೆನಪುಗಳಿಂದ ಕಟ್ಟಿದ ಮನೆ ಅದು ಎಂದು ರಕ್ಷಿತಾ ಶೆಟ್ಟಿ ಹೇಳಿಕೊಂಡಿದ್ದಾರೆ.
35
ಮನೆ ಬಿಟ್ಟು ಹೊರಡುವ ಸಮಯ
ಇದು ಕೇವಲ ಒಂದು ಪ್ರಯಾಣವಲ್ಲ, ನಾನು ಇಲ್ಲಿ ಅನೇಕ ಸಂಬಂಧಗಳನ್ನು ಕಟ್ಟಿಕೊಂಡೆ. ಬಹಳಷ್ಟು ಅಣ್ಣಂದಿರು, ಅಮೂಲ್ಯವಾದ ಬಾಂಧವ್ಯಗಳು – ಇವು ಸದಾ ನನ್ನ ಹೃದಯದಲ್ಲಿರುತ್ತವೆ. ಸುದೀಪ್ ಸರ್ ಮನೆಗೆ ಪ್ರವೇಶಿಸಿದ ಕ್ಷಣ ತುಂಬಾ ಸಂತೋಷ ತಂದಿತು. ಆದರೆ ಮನೆ ಬಿಟ್ಟು ಹೊರಡುವ ಸಮಯ… ಅದು ನನ್ನ ಜೀವನದ ಅತ್ಯಂತ ಕಠಿಣ ಮತ್ತು ನೋವಿನ ಕ್ಷಣಗಳಲ್ಲಿ ಒಂದಾಗಿತ್ತು.
ಈ ಎಲ್ಲಾ ತಿಂಗಳುಗಳ ನಂತರ ಈ ಮನೆಯನ್ನು ಬಿಟ್ಟು ಹೋಗುವುದು ಸುಲಭವಾಗಿರಲಿಲ್ಲ. ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ. ಕೆಲವು ಸ್ಥಳಗಳು ನಮ್ಮನ್ನು ಬಿಟ್ಟು ಹೋಗಲು ಬಿಡುವುದಿಲ್ಲ ಅವು ನಮ್ಮೊಳಗೇ ಉಳಿದುಬಿಡುತ್ತವೆ.
ಮನೆಯ ಹೊರಗಿದ್ದ ನನ್ನ ಜನರಿಗೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿ, ಬೆಂಬಲ, ಪ್ರಾರ್ಥನೆಗಳು ಮತ್ತು ಮತಗಳು ನನಗೆ ಶಕ್ತಿ ನೀಡಿದವು. ನಾನು ಅಷ್ಟು ದೂರ ಈ ಮನೆಯಲ್ಲಿ ಉಳಿಯಲು ನಿಮಗೇ ಕಾರಣ. ಯಾವತ್ತೂ ಕೃತಜ್ಞತೆ. ಯಾವತ್ತೂ ನೆನಪುಗಳು ಎಂದು ಬಿಗ್ಬಾಸ್ ಪಯಣದ ಬಗ್ಗೆ ರಕ್ಷಿತಾ ಶೆಟ್ಟಿ ಬರೆದುಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.