Rakshitha Shetty Bigg Boss entry 'ತುಳುನಾಡಿನ ಕನ್ನಡತಿ' ರಕ್ಷಿತಾ ಶೆಟ್ಟಿ ಬಿಗ್ಬಾಸ್ ಮನೆಗೆ ಪ್ರವೇಶಿಸಿದ್ದಾರೆ. ವೇದಿಕೆಯಲ್ಲಿ ಸುದೀಪ್ ಅವರಿಗೆ ತುಳು ಭಾಷೆಯಲ್ಲಿ ಮೀನು ಸಾರು ರೆಸಿಪಿ ಹೇಳಿ ಗೊಂದಲ ಸೃಷ್ಟಿಸಿದ್ದು, ಉತ್ತರ ಕರ್ನಾಟಕದ ಮಲ್ಲಮ್ಮ ಜೊತೆಗಿನ ಅವರ ಸಂಭಾಷಣೆ ಕುತೂಹಲ ಮೂಡಿಸಿದೆ.
ತುಳುನಾಡಿನ ಕನ್ನಡತಿ ಅಂತಾನೇ ಗುರುತಿಸಿಕೊಂಡಿರುವ ರಕ್ಷಿತಾ ಶೆಟ್ಟಿ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಮುಂಬೈನಲ್ಲಿ ಹುಟ್ಟಿ ಬೆಳೆದಿರುವ ರಕ್ಷಿತಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಕ್ಯೂಟ್ ಕ್ಯೂಟ್ ಮಾತುಗಳಿಂದಲೇ ಫೇಮಸ್ ಆಗಿದ್ದಾರೆ. ಇದೀಗ ಈ ಜನಪ್ರಿಯತೆ ಬಿಗ್ಬಾಸ್ ಮನೆಯವರೆಗೂ ಕರೆದುಕೊಂಡು ಬಂದಿದೆ.
25
ಟ್ರೋಲ್
ಮುಂಬೈನಲ್ಲಿ ಬೆಳೆದಿರುವ ಕಾರಣ ರಕ್ಷಿತಾ ಶೆಟ್ಟಿ ಅವರಿಗೆ ಕನ್ನಡ ಮಾತನಾಡಲು ಸ್ವಲ್ಪ ಕಷ್ಟವಾಗುತ್ತದೆ. ಈ ಕಾರಣದಿಂದಲೇ ರಕ್ಷಿತಾ ಶೆಟ್ಟಿ ಅವರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಟ್ರೋಲ್ಗೆ ಒಳಗಾಗುತ್ತಿದ್ದರು. ಜನರು ತಮ್ಮನ್ನು ಟ್ರೋಲ್ ಮಾಡಿದರೂ ರಕ್ಷಿತಾ ಶೆಟ್ಟಿ ಮಾತ್ರ ಕನ್ನಡ ಮಾತನಾಡೋದನ್ನು ನಿಲ್ಲಿಸಿಲ್ಲ.
35
ಮೀನು ಸಾರು ರೆಸಿಪಿ ಕೇಳಿ ಸುದೀಪ್ ಶಾಕ್
ಬಿಗ್ಬಾಸ್ ವೇದಿಕೆಗೆ ಬರುತ್ತಿದ್ದಂತೆ ಸುದೀಪ್ ಅವರಿಗೆ ಮೀನು ಸಾರು ಮಾಡೋದು ಹೇಗೆ ಅಂತ ಹೇಳಿದ್ದಾರೆ. ರಕ್ಷಿತಾ ಶೆಟ್ಟಿ ಹೇಳಿದ ರೆಸಿಪಿ ಕೇಳಿ ಸುದೀಪ್ ಅವರೇ ಒಂದು ಕ್ಷಣ ಶಾಕ್ ಆಗಿದ್ದಾರೆ. ಮೀನು ಸಾಂಬಾರ್ ಮಾಡಲು ಬೇಕಾಗುವ ಸಾಮಾಗ್ರಿ ಹೆಸರುಗಳನ್ನು ತುಳು ಭಾಷೆಯಲ್ಲಿ ಹೇಳಿದ್ದರಿಂದ ನೋಡುಗರು ಸಹ ಕನ್ಫ್ಯೂಸ್ ಆಗಿದ್ದಾರೆ.
ಸುದೀಪ್ ಅವರು ಮಧ್ಯೆ ಮಧ್ಯೆ ಪ್ರಶ್ನೆ ಕೇಳಿದ್ದರಿಂದ ರಕ್ಷಿತಾ ಶೆಟ್ಟಿ ಸಹ ಗೊಂದಲಕ್ಕೊಳಗಾಗಿರೋದನ್ನು ಬಿಡುಗಡೆಯಾಗಿರುವ ಪ್ರೋಮೋದಲ್ಲಿ ಕಾಣಬಹುದು. ರಕ್ಷಿತಾ ಬಿಗ್ಬಾಸ್ ಮನೆಯಲ್ಲಿ ಇದೇ ರೀತಿ ಮಾತನಾಡಿದ್ರೆ ದಿನಕ್ಕೆ ನೂರು ಬಾರಿ ಕನ್ನಡದ ಹಾಡು ಪ್ಲೇ ಆಗುತ್ತೆ ಎಂದು ಕಮೆಂಟ್ ಮಾಡಿದ್ದಾರೆ.
ಈಗಾಗಲೇ ಉತ್ತರ ಕರ್ನಾಟಕದ ಮಲ್ಲಮ್ಮ ಬಿಗ್ಬಾಸ್ ಮನೆ ಪ್ರವೇಶಿಸಿದ್ದಾರೆ. ಭಾಷೆಯ ವಿಚಾರದಲ್ಲಿ ಮಲ್ಲಮ್ಮ ಮತ್ತು ರಕ್ಷಿತಾ ಶೆಟ್ಟಿ ತದ್ವಿರುದ್ಧವಾಗಿದ್ದಾರೆ. ಇಬ್ಬರನ್ನು ಜೊತೆಯಾಗಿ ಬಿಟ್ಟರೆ ಇವರ ನಡುವಿನ ಸಂಭಾಷಣೆ ಹೇಗಿರುತ್ತೆ ಎಂದು ಕಲ್ಪನೆ ಮಾಡಿಕೊಂಡು ವೀಕ್ಷಕರು ನಗೆಗಡಿಲಿನಲ್ಲಿ ತೇಲಾಡುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.