ವಿಚಾರಣೆ ವೇಳೆ ಸತ್ಯ ಬಾಯಿಬಿಟ್ಟ ಕಳ್ಳ:
ಸಾರ್ವಜನಿಕರು ಆತನನ್ನು ಹಿಡಿದು ವಿಚಾರಣೆ ನಡೆಸಿದಾಗ, ತಾನು ಕಳ್ಳತನ ಮಾಡಿದ್ದು, ಪೊಲೀಸರು ತನ್ನನ್ನು ಹಿಡಿದು ಠಾಣೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಓಡಿಬಂದಿದ್ದಾಗಿ ಬಾಯಿಬಿಟ್ಟಿದ್ದಾನೆ. ತಕ್ಷಣ ಸ್ಥಳೀಯರು ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ, ಆರೋಪಿಯನ್ನು ಮತ್ತೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.