2019ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಹಣಕಾಸು ಸಚಿವರು ಪ್ರತಿ ವರ್ಷ ಕೇಂದ್ರ ಬಜೆಟ್ ಮಂಡಿಸುವಾಗ ಅರ್ಥಪೂರ್ಣವಾದ ಕೈಮಗ್ಗ ಸೀರೆಗಳನ್ನು ಧರಿಸುತ್ತಾರೆ. ಭಾರತೀಯ ಜವಳಿ ಮೇಲಿನ ಪ್ರೀತಿಗೆ ಹೆಸರುವಾಸಿಯಾಗಿರುವ ಸೀತಾರಾಮನ್ ಅವರು ಕೈಮಗ್ಗದ ಸೀರೆಗಳನ್ನು ಉತ್ತೇಜಿಸುವ ಬಗ್ಗೆ ಯಾವಾಗಲೂ ಧ್ವನಿಯೆತ್ತಿದ್ದಾರೆ. 2019ರಲ್ಲಿ, ಅವರು ಭಾರತೀಯ ಜವಳಿಗಳ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ರೇಷ್ಮೆ ಅಥವಾ ಹತ್ತಿ, ಒರಿಸ್ಸಾ-ಕೈಮಗ್ಗ ಸೀರೆಗಳು ನನ್ನ ಮೆಚ್ಚಿನವುಗಳಲ್ಲಿ ಒಂದಾಗಿದೆ- ಬಣ್ಣ, ನೇಯ್ಗೆ, ವಿನ್ಯಾಸ, ತುಂಬಾ ಒಳ್ಳೆಯದು ಎಂದು ಸಚಿವೆ ಹೇಳಿದ್ದರು.