ಇತ್ತೀಚೆಗೆ ಬಿಜೆಪಿ ಶಾಸಕ ಮುನಿರತ್ನ ಮೇಲಿನ ಮೊಟ್ಟೆ ಎಸೆತ ಪ್ರಕರಣ ಸಂಬಂಧ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರ ಕೈವಾಡ ಎಂದು ಬಿಜೆಪಿ ಆರೋಪಿಸಿದ್ದರೆ, ಪರಾಜಿತ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಇದು ಶಾಸಕ ಮುನಿರತ್ನ ಅನುಕಂಪ ಗಿಟ್ಟಿಸಿಕೊಳ್ಳಲು ಮಾಡಿದ ನಾಟಕ ಎಂದು ಆರೋಪಿಸಿ ಭಾರಿ ಕೋಲಾಹಲ ಸೃಷ್ಟಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಕುಸುಮಾ ಇದೀಗ ಪ್ಯಾರಿಸ್ ಪ್ರವಾಸ ಮುಗಿಸಿದ್ದಾರೆ.