ಕೃಷಿ ಸಹಕಾರಕ್ಕೆ ಭಾರತ- ಜರ್ಮನಿ ಒಪ್ಪಂದ!

Published : May 03, 2022, 09:57 AM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ವಿದೇಶ ಪ್ರವಾಸದ ಮೊದಲನೇ ದಿನವಾದ ಸೋಮವಾರ ಜರ್ಮನಿಯ ರಾಜಧಾನಿ ಬರ್ಲಿನ್‌ಗೆ ಆಗಮಿಸಿದರು. ಈÜ ವೇಳೆ ಅವರಿಗೆ ಭಾರತೀಯ ಸಮುದಾಯ ಮತ್ತು ಜರ್ಮನ್‌ ಸರ್ಕಾರದ ಪರವಾಗಿ ಅದ್ಧೂರಿ ಸ್ವಾಗತ ನೀಡಲಾಯಿತು. ಅಲ್ಲದೇ ಬರ್ಲಿನ್‌ನ ಫೆಡೆರಲ್‌ ಚಾನ್ಸಲರಿಯೆದುರು ‘ಗಾರ್ಡ್‌ ಆಫ್‌ ಆನರ್‌’ ನೀಡಿ ಬರ ಮಾಡಿಕೊಳ್ಳಲಾಯಿತು.

PREV
15
ಕೃಷಿ ಸಹಕಾರಕ್ಕೆ ಭಾರತ- ಜರ್ಮನಿ ಒಪ್ಪಂದ!

 ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸೋಮವಾರ ಜರ್ಮನ್‌ ರಾಜಧಾನಿ ಬರ್ಲಿನ್‌ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇದೇ ವೇಳೆ ಜರ್ಮನಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಮಾತನಾಡಿದರು.

25

ಬರ್ಲಿನ್‌ನ ಒಳಾಂಗಣ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ಮೋದಿ ಅವರು ಆಗಮಿಸುತ್ತಿದ್ದಂತೆ ‘2024: ಒನ್ಸ್‌ ಮೋರ್‌ ಮೋದಿ’ (2024ರಲ್ಲಿ ಮತ್ತೊಮ್ಮೆ ಮೋದಿ ಎಂದು ಉದ್ಘೋಷ ಮಾಡಿದರು.) ಎಂದು ಜಯಘೋಷ ಮಾಡಿದರು.

35

ಬಳಿಕ ಮಾತನಾಡಿದ ಮೋದಿ ‘ನಿಮ್ಮನ್ನೆಲ್ಲ ಭೇಟಿಯಾಗಿ ಬಹಳ ಸಂತೋಷವಾಗಿದೆ. ಅದರಲ್ಲೂ ಬಹುತೇಕ ಯುವಕರು ಭಾಗವಹಿಸಿದ್ದನ್ನು ನೋಡಿ ಇನ್ನಷ್ಟು ಸಂತೋಷವಾಗಿದೆ. ಇದು ನನ್ನ ಸೌಭಾಗ್ಯ’ ಎಂದಿದ್ದಾರೆ.

45

ಹಿಂದೆ ವಿದೇಶಿಯರ ಆಳ್ವಿಕೆಯಿಂದಾಗಿ ದೇಶದ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಆದರೆ ಭಾರತ ಇಂದು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಯುತ್ತಿದೆ. ದೇಶದಲ್ಲಿ ಎಂದಿಗೂ ಸಂಪನ್ಮೂಲಗಳ ಕೊರತೆಯೇ ಇರಲಿಲ್ಲ. ಇದರೊಂದಿಗೆ ರಾಜಕೀಯ ಇಚ್ಛಾಶಕ್ತಿಯು ಸೇರಿ ದೇಶದಲ್ಲಿ ಹೊಸ ಸುಧಾರಣೆಗಳಿದೆ ನಾಂದಿ ಹಾಡಲಾಗುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ಸಾಧನೆ ಮಾಡುತ್ತಿದೆ. 

55

ದೇಶದಲ್ಲಿ ಸ್ಥಿರವಾದ ಸರ್ಕಾರವಿದೆ. ಜನರು ಸರ್ಕಾರದಲ್ಲಿ ವಿಶ್ವಾಸವನ್ನಿರಿಸಿದ್ದಾರೆ. ರಿಫಾಮ್‌ರ್‍, ಪರ್ಫಾಮ್‌, ಟ್ರಾನ್ಸ್‌ಫಾಮ್‌ರ್‍ (ಸುಧಾರಣೆ, ಕಾರ್ಯ ಸಾಧನೆ ಹಾಗೂ ಬದಲಾವಣೆ) ಈ ಮೂರು ಮಂತ್ರದೊಂದಿಗೆ ಭಾರತವು ಅಭಿವೃದ್ಧಿಯ ಹೊಸ ಉತ್ತುಂಗಕ್ಕೇರಲಿದೆ’ ಎಂದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories