ಸಚಿವ ಮಾಧುಸ್ವಾಮಿಗೆ ಭವಾನಿ ರೇವಣ್ಣ ಸವಾಲು

Published : Oct 19, 2019, 08:37 AM IST
ಸಚಿವ ಮಾಧುಸ್ವಾಮಿಗೆ  ಭವಾನಿ ರೇವಣ್ಣ ಸವಾಲು

ಸಾರಾಂಶ

ಭವಾನಿ ರೇವಣ್ಣ ಹಾಸನ ಉಸ್ತುವಾರಿ ಸಚಿವರಾಗಿರುವ ಮಾಧುಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ. ನಂಬರ್ ಒನ್ ಸ್ಥಾನದ ಚಾಲೇಂಜ್ ಹಾಕಿದ್ದಾರೆ. 

ಹಾಸನ [ಅ.19]:  ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ನಂ.1 ಸ್ಥಾನಕ್ಕೇರಲು ನಾನೊಬ್ಬಳೇ ಕಾರಣ ಎಂದು ನಾನು ಹೇಳಿಲ್ಲ. 

ನನ್ನಿಂದ ಅಥವಾ ರೇವಣ್ಣ ಅವರಿಂದಲೇ ಆಗಿದೆ ಎಂದೂ ಹೇಳಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಳಿದುಕೊಂಡು ಮಾತನಾಡಬೇಕು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪತ್ನಿ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಅವರು ಸಚಿವ ಜೆ.ಸಿ.ಮಾಧುಸ್ವಾಮಿಗೆ ತಿರುಗೇಟು ನೀಡಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹಾಸನಾಂಬೆ ದರ್ಶನ ಪಡೆದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈಗ ಅವರೇ ಉಸ್ತುವಾರಿ ಸಚಿವರಾಗಿದ್ದಾರೆ. ನಂಬರ್‌ ಒನ್‌ ಮಾಡಲಿ ಎಂದು ಸವಾಲು ಹಾಕಿದರು. ಅಧಿಕಾರಿಗಳು, ಪೋಷಕರು, ಎಲ್ಲರ ಸಹಕಾರದಿಂದ ಸಾಧನೆ ಮಾಡಲಾಗಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಮಾಡಿದ್ದು ಹಾಸನದಲ್ಲೇ ಮೊದಲು. ಇದನ್ನು ಈಗ ಉಳಿದವರು ಅನುಸರಿಸುತ್ತಿದ್ದಾರೆ ಎಂದರು.

PREV
click me!

Recommended Stories

ಹಾಸನದಲ್ಲೇ ಹಾಡ ಹಗಲೇ ಬೆಚ್ಚಿ ಬೀಳಿಸುವ ಘಟನೆ: ಶಾಲಾ ಬಾಲಕಿಯ ಬೆನ್ನಟ್ಟಿಕೊಂಡು ಮನೆ ಬಾಗಿಲವರೆಗೂ ಬಂದ ಅಪರಿಚಿತ
ಹಾಸನದ 7ನೇ ತರಗತಿ ಬಾಲಕ ಏಷ್ಯನ್ ಬುಕ್‌ ಆಫ್ ರೆಕಾರ್ಡ್, ಕಣ್ಣು ಮುಚ್ಚಿಕೊಂಡೇ 1 ನಿಮಿಷದಲ್ಲಿ 8 ಕ್ಯೂಬ್ ಕಮಾಲ್!