ಪ್ರಯಾಣಿಕರ ಗಮನಕ್ಕೆ: ಹಾಸನ-ಬೆಂಗಳೂರಿನ ಈ ಬಸ್ ಕೆಟ್ಟು ನಿಂತಿದೆ

Published : Oct 15, 2019, 11:32 AM ISTUpdated : Oct 15, 2019, 11:36 AM IST
ಪ್ರಯಾಣಿಕರ ಗಮನಕ್ಕೆ: ಹಾಸನ-ಬೆಂಗಳೂರಿನ ಈ ಬಸ್ ಕೆಟ್ಟು ನಿಂತಿದೆ

ಸಾರಾಂಶ

ಮಧ್ಯರಾತ್ರಿಯಿಂದಲೂ ಬಸ್ ಕೆಟ್ಟು ನಿಂತಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ಹಾಸನದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. 

ಹಾಸನ [ಅ.15]: ಟಯರ್ ಪಂಕ್ಚರ್ ಆಗಿ ಮಧ್ಯರಾತ್ರಿಯಿಂದಲೂ ಖಾಸಗಿ ಬಸ್ ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. 

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನಿಂತಿದ್ದು, ಬಸ್ಸಿನಲ್ಲಿದ್ದ 30 ಪ್ರಯಾಣಿಕರು ಪರದಾಟ ಕೇಳುವರಿಲ್ಲದಂತಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದೋಣಿಗಲ್ ಸಮೀಪ ಬಸ್ ಭಾರತಿ ಬಸ್ ಟಯರ್ ಪಂಕ್ಚರ್ ಆಗಿ ಕೆಟ್ಟು ನಿಂತಿದ್ದು, ರಸ್ತೆಯಲ್ಲಿ ರಾತ್ರಿ ಕಳೆಯುವಂತಾಯ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಗಳೂರು ಮೂಲದ ಭಾರತಿ ಟ್ರಾವೆಲ್ಸ್ ಸೇರಿದ ಬಸ್ ಇದಾಗಿದ್ದು, ಈ ಬಗ್ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

PREV
click me!

Recommended Stories

ಹೊಳೆನರಸೀಪುರ ದೇಗುಲದ ರಥದ ಬಟ್ಟೆ ವಿಚಾರಕ್ಕೆ ಕಿತ್ತಾಡಿಕೊಂಡ ರೇವಣ್ಣ-ಶ್ರೇಯಸ್ ಪಟೇಲ್, ಬರೇ ಹೂವಿನ ಅಲಂಕಾರದಲ್ಲೇ ಸಂಪನ್ನಗೊಂಡ ರಥೋತ್ಸವ
ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ