ಪುರುಷರಿಗೆ ಆತಂಕಕಾರಿ ಸುದ್ದಿ: ಸ್ವಲ್ಪ ಎಚ್ಚರ ತಪ್ಪಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ..!

Published : Jun 22, 2022, 08:49 AM IST
ಪುರುಷರಿಗೆ ಆತಂಕಕಾರಿ ಸುದ್ದಿ: ಸ್ವಲ್ಪ ಎಚ್ಚರ ತಪ್ಪಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ..!

ಸಾರಾಂಶ

*  ಬೆಂಗ್ಳೂರಲ್ಲಿ ಪುರುಷರ ಆರೋಗ್ಯ ನಿರ್ಲಕ್ಷ್ಯ ಹೆಚ್ಚಳ *  ರೋಗ ಲಕ್ಷಣ ಇಲ್ಲದ 2000 ಪುರುಷರ ಪರೀಕ್ಷೆ *  ಶೇ.35ರಷ್ಟು ಮಂದಿಗೆ ಮಧುವೇಹ, ಶೇ.25ರಷ್ಟು ಹೃದ್ರೋಗ  

ಬೆಂಗಳೂರು(ಜೂ.22):  ರಾಜಧಾನಿಯಲ್ಲಿ ಪುರುಷರ ಆರೋಗ್ಯ ನಿರ್ಲಕ್ಷ್ಯ ಹೆಚ್ಚಳವಾಗಿದ್ದು, ಪರೀಕ್ಷೆಗೆ ಒಳಪಡಿಸಿದಾಗ ಶೇ. 70ರಷ್ಟು ಮಂದಿಯಲ್ಲಿ ವಿವಿಧ ರೋಗಗಳು ಪತ್ತೆಯಾಗಿ ಆತಂಕ ಮೂಡಿಸಿವೆ.

ದೇಶದಲ್ಲಿ ಮಹಿಳೆಯರ ಸಾವಿನ ಪ್ರಮಾಣಕ್ಕೆ ಹೋಲಿಸಿದರೆ ಪುರುಷರ ಸಾವಿನ ಪ್ರಮಾಣವೇ ಹೆಚ್ಚಿದ್ದು, ಇದಕ್ಕೆ ಪುರುಷರ ಅರೋಗ್ಯ ನಿರ್ಲಕ್ಷ್ಯವೇ ಕಾರಣ ಎಂದು ಕೆಲ ತಜ್ಞರು ಅಭಿಪ್ರಾಯಪಟ್ಟಿದ್ದರು. ಈ ಹಿನ್ನೆಲೆ ಬೆಂಗಳೂರಿನ ನ್ಯೂರಾ ವೈದ್ಯಕೀಯ ಸಂಸ್ಥೆಯು ಕಳೆದ ವರ್ಷ ನಗರದಲ್ಲಿ ಯಾವುದೇ ರೋಗ ಲಕ್ಷಣ ಇಲ್ಲದ 2000 ವಯಸ್ಕ ಪುರುಷರನ್ನು ಪರೀಕ್ಷೆಗೆ ಒಳಪಡಿಸಿದಾಗ ಹಲವರು ರೋಗಗಳೊಂದಿಗೆ ಜೀವಿಸುತ್ತಿರುವುದು ಪತ್ತೆಯಾಗಿದೆ.

ಸರಿಯಾದ ರೀತಿಯಲ್ಲಿ ಅಡುಗೆ ಮಾಡಿದ್ರೆ ಮಾತ್ರ ಸಾಲ್ದು, ತಿನ್ನೋ ರೀತಿನೂ ಸರಿಯಾಗಿರ್ಬೇಕು

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನ್ಯೂರಾದ ವೈದ್ಯಕೀಯ ನಿರ್ದೇಶಕ ಡಾ. ತೌಸಿಫ್‌ ಅಹ್ಮದ್‌ ತಂಗಲ್ವಾಡಿ, ‘2000 ಮಂದಿ ಆರೋಗ್ಯವಂತ ಪುರುಷರ ತಪಾಸಣೆ ನಡೆಸಿದಾಗ ಇವರಲ್ಲಿ ಶೇ.70 ಮಂದಿ ಒಳಾಂಗಗಳ ಕೊಬ್ಬು ಹೊಂದಿರುವ ಅಘಾತಕಾರಿ ಮಾಹಿತಿ ಲಭಿಸಿದೆ. ಈ ಕೊಬ್ಬು ಹೃದ್ರೋಗ ಮತ್ತು ಮಧುಮೇಹಕ್ಕೆ ಕಾರಣವಾಗಲಿದೆ. ಜತೆಗೆ ಶೇ.35 ಪುರುಷರಲ್ಲಿ ಮಧುಮೇಹ, ಶೇ.20 ಮಂದಿಯಲ್ಲಿ ಪೂರ್ವ ಮಧುಮೇಹ (ಮೊದಲ ಹಂತದ ಮದುಮೇಹ), ಶೇ.25 ಪುರುಷರ ಹೃದ್ರೋಗ ಕಾರಣದಿಂದ ಪರಿಧಮನಿಗಳಲ್ಲಿ ಕ್ಯಾಲ್ಸಿಯಂ ಅಂಶ ಪತ್ತೆಯಾಗಿದ್ದು, ಭವಿಷ್ಯದಲ್ಲಿ ಹೃದಯಾಘಾತಕ್ಕೆ ಸಿಲುಕುವ ಅಪಾಯ ಹೆಚ್ಚಿರುತ್ತದೆ ಎಂದು ತಿಳಿಸಿದರು.

ಮರಣದ ಪ್ರಮಾಣ ಪುರುಷರಲ್ಲಿ ಹೆಚ್ಚು

ಮಹಿಳೆಯರಿಗಿಂತ ಪುರುಷರು ಆರೋಗ್ಯದ ಬಗ್ಗೆ ಹೆಚ್ಚು ನಿರ್ಲಕ್ಷ್ಯ ಮಾಡುತ್ತಾರೆ. ಇದರಿಂದಾಗಿ 2019ರಲ್ಲಿ ಮಹಿಳೆಯರ ಮರಣ ಪ್ರಮಾಣ ಪ್ರತಿ ಸಾವಿರ ಮಹಿಳೆಯರಲ್ಲಿ 145ರಷ್ಟಿದ್ದರೆ, ಪ್ರತಿ ಸಾವಿರ ಪುರುಷರಲ್ಲಿ 201 ಮಂದಿ ಸಾವನ್ನಪ್ಪಿದ್ದಾರೆ. ಪುರುಷರು ತಮ್ಮ ಸಾಮಾಜಿಕ ಸ್ಥಿತಿಗತಿಯಿಂದಾಗಿ ಆರೋಗ್ಯದ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತಿಲ್ಲ ಎಂದು ಡಾ. ತೌಸಿಫ್‌ ತಿಳಿಸಿದರು.
 

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆರೋಗ್ಯಕರ ತುಳಸಿ ಅಗೆದು ತಿಂದ್ರೆ ಅಪಾಯ, ಧರ್ಮ- ಆಯುರ್ವೇದ ಹೇಳೋದೇನು?
ಅತಿಯಾದ್ರೆ ಅಮೃತವೂ ವಿಷ, ಇವನ್ನೆಲ್ಲಾ ಮಿತಿ ಮೀರಿ ತಿಂದ್ರೆ ಅಷ್ಟೇ..