ಬೇಸಿಗೆಯಲ್ಲಿ ಹಾವು ಕಡಿತ ಹೆಚ್ಚಳ; ಹಾವು ಕಚ್ಚಿದಾಗ ಕೈಗೊಳ್ಳುವ ಮುಂಜಾಗ್ರತೆ ಮಾರ್ಗಸೂಚಿ ಬಿಡುಗಡೆ!

Published : Mar 26, 2025, 06:48 PM ISTUpdated : Mar 26, 2025, 06:50 PM IST
ಬೇಸಿಗೆಯಲ್ಲಿ ಹಾವು ಕಡಿತ ಹೆಚ್ಚಳ; ಹಾವು ಕಚ್ಚಿದಾಗ ಕೈಗೊಳ್ಳುವ ಮುಂಜಾಗ್ರತೆ ಮಾರ್ಗಸೂಚಿ ಬಿಡುಗಡೆ!

ಸಾರಾಂಶ

ಬೇಸಿಗೆಯಲ್ಲಿ ಹಾವು ಕಡಿತ ಹೆಚ್ಚಾಗುವ ಸಾಧ್ಯತೆಗಳಿದ್ದು, ಭಾರತದಲ್ಲಿ ಹಾವು ಕಡಿತದಿಂದಾಗುವ ಸಾವುಗಳು ಅಧಿಕವಾಗಿವೆ. ಹಾವು ಕಚ್ಚಿದ ತಕ್ಷಣ ಗಾಬರಿಯಾಗದೆ, ಆಭರಣಗಳನ್ನು ತೆಗೆದು, ಗಾಯಕ್ಕೆ ಬ್ಯಾಂಡೇಜ್ ಹಾಕಿ. ಯಾವುದೇ ಸ್ವಯಂ ಚಿಕಿತ್ಸೆ ಮಾಡದೆ, ತಕ್ಷಣ ಆಸ್ಪತ್ರೆಗೆ ಹೋಗುವುದು ಮುಖ್ಯ. ಭಾರತ್ ಸೀರಮ್ ಸಂಸ್ಥೆಯು ಈ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬೆಂಗಳೂರು (ಮಾ.26): ಬೇಸಿಗೆ ಋತುವಿನಲ್ಲಿ ಬಿಸಿಲಿನ ತಾಪ ತಾಳಲಾರದೇ ಹೊರಬರುವ ಹಾವುಗಳು ಮನುಷ್ಯರನ್ನು ಕಚ್ಚುವ ಸಾಧ್ಯತೆ ಹೆಚ್ಚಾಗಿರುತ್ತವೆ. ಆದ್ದರಿಂದ ವಿಷಕಾರಿ ಹಾವುಗಳು ಕಚ್ಚಿದಾಗ ಮುಂಜಾಗ್ರತಾ ಕ್ರಮವಾಗಿ ಏನು ಮಾಡಬೇಕು ಎಂಬಮ ಮಾರ್ಗಸೂಚಿನ್ನು ಭಾರತ್‌ ಸೀರಮ್ ಮತ್ತು ವ್ಯಾಕ್ಸಿನೇಷನ್‌ ಸಂಸ್ಥೆ (ಬಿಎಸ್‌ವಿ) ಬಿಡುಗಡೆ ಮಾಡಿದೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಹೆಚ್‌ಒ) ದತ್ತಾಂಶದ ಪ್ರಕಾರ ವಾರ್ಷಿಕವಾಗಿ ಜಾಗತಿಕ ಮಟ್ಟದಲ್ಲಿ 4 ರಿಂದ 5 ಮಿಲಿಯನ್ ಜನರು ವಿಷಕಾರಿ ಹಾವುಗಳ ಕಡಿತದಿಂದ ಸಾವನ್ನಪ್ಪುತ್ತಿದ್ದಾರೆ. ಅದರಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಹಾವಿನ ಕಡಿತದ ಸಾವುಗಳನ್ನು ಹೊಂದಿದೆ. ಹೀಗಾಗಿ, ಹಾವು ಕಡಿತದಿಂದಾಗುವ ಸಾವಿನ ಪ್ರಕರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಎಸ್‌ವಿ ಸಂಸ್ಥೆಯಿಂದ ಹಾವು ಕಡಿತ ಸಂಭವಿಸಿದರೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಹಾಗೂ ಚಿಕಿತ್ಸೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹಾವು ಕಡಿತದಿಂದ ಹೆಚ್ಚಾಗಿ ಬಹು-ಅಂಗಾಂಗ ವೈಫಲ್ಯ ಉಂಟುಮಾಡಬಹುದು.  ರಕ್ತಸ್ರಾವ, ಪಾರ್ಶ್ವವಾಯು, ಸ್ನಾಯು ನಷ್ಟ, ಹೃದಯಾಘಾತ, ತೀವ್ರವಾದ ಮೂತ್ರ ಪಿಂಡದ ಸಮಸ್ಯೆ ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಬಹುತೇಕ ಪ್ರಕರಣದಲ್ಲಿ ಸಾವು ಸಂಭವಿಸಬಹುದು. ಹೀಗಾಗಿ, ಹಾವು ಕಡಿತವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಅದಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಗತ್ಯವಾಗಿದೆ.

ಇದನ್ನೂ ಓದಿ: ವಿಶ್ವದಲ್ಲಿ ಹಾವು ಕಡಿತದಿಂದ ಸಾಯುವ ಜಾಗತಿಕ ರಾಜಧಾನಿ ಭಾರತ! ಈ ನಾಲ್ಕು ವಿಷಪೂರಿತ ಹಾವುಗಳಿಂದಲೇ ಹೆಚ್ಚು ಸಾವು!

ಹಾವು ಕಡಿತ ತಕ್ಷಣ ಏನು ಮಾಡಬೇಕು?
- ಹಾವು ಕಡಿದ ಕೂಡಲೇ ಗಾಬರಿಯಾಗದೇ, ನೀವು ಓಡಾಡುವುದನ್ನು ನಿಲ್ಲಿಸಿ ಒಂದೆಡೆ ಕೂರಬೇಕು, ಬೇರೆಯವರ ಸಹಾಯ ಪಡೆದು ಆಸ್ಪತ್ರೆಗೆ ಹೋಗಬೇಕು. 
- ಹಾವು ಕಚ್ಚಿದ ಸ್ಥಳದಲ್ಲಿ ಯಾವುದೇ ಆಭರಣ ಅಥವಾ ಬಿಗಿಯಾದ ಬಟ್ಟೆ ಇದ್ದರೆ ಕೂಡಲೇ ತೆಗೆದು ಹಾಕಬೇಕು.
- ಒಂದು ವೇಳೆ ಎದೆ ಭಾಗದಲ್ಲಿ ಹಾವು ಕಚ್ಚಿದ್ದರೆ, ಆ ವ್ಯಕ್ತಿಯನ್ನು ಮಲಗಿಸಬೇಕು. ವಿಷ ಹರಡುವುದನ್ನು ತಡೆಯಲು ವ್ಯಕ್ತಿಯನ್ನು ಶಾಂತವಾಗಿರಿಸಬೇಕು.
- ಹಾವು ಕಚ್ಚಿದ ಗಾಯವನ್ನು ಸ್ವಚ್ಛವಾದ ಬ್ಯಾಂಡೇಜ್‌ನಿಂದ ಮುಚ್ಚಿ, ಬೇರೆ ವೈರಾಣುಗಳು ಸೇರದಂತೆ ಕಟ್ಟಬೇಕು. 
- ಒಂದು ವೇಳೆ ಹಾವು ನಿಮ್ಮ ಕಾಲಿಗೆ ಕಚ್ಚಿದರೆ, ನೀವು ನಿಮ್ಮ ಬೂಟುಗಳನ್ನು ತೆಗೆದು ಸಾಧ್ಯವಾದಷ್ಟು ಬೇಗ ವೈದ್ಯರ ಬಳಿಗೆ ಹೋಗಬೇಕು.

ಇದನ್ನೂ ಓದಿ: ಬಹಿರ್ದೆಸೆಗೆ ಕುಳಿತ ವ್ಯಕ್ತಿ ಮೇಲೆ ದಾಳಿ ಮಾಡಿ, ನುಂಗಲು ಮುಂದಾದ 13 ಅಡಿ ಉದ್ದದ ಹೆಬ್ಬಾವು!

ಹಾವು ಕಚ್ಚಿದಾಗ ಏನು ಮಾಡಬಾರದು: 
- ಯಾವುದೇ ಸ್ವಯಂ ಔಷಧ ಮಾಡಿಕೊಳ್ಳುವುದು ಒಳ್ಳೆಯದಲ್ಲ.
- ಹಾವು ಕಚ್ಚಿದ ಗಾಯವನ್ನು ಕತ್ತರಿಸಲು ಪ್ರಯತ್ನಿಸಬೇಡಿ, ವಿಷವನ್ನು ಬಾಯಿಂದ ಹೀರಲು ಪ್ರಯತ್ನಿಸಬೇಡಿ.
- ಗಾಯಕ್ಕೆ ಐಸ್ ಹಚ್ಚಬೇಡಿ, ಕೆಫೀನ್ ಅಥವಾ ಆಲ್ಕೋಹಾಲ್ ಇರುವ ಪದಾರ್ಥವನ್ನು ವ್ಯಕ್ತಿಗೆ ಕೊಡಬೇಡಿ.
- ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಓಡಾಡಲು ಬಿಡಬೇಡಿ, ಕೂಡಲೇ ಆತನನ್ನು ವಾಹನಸಲ್ಲಿ ಆಸ್ಪತ್ರೆಗೆ ಕರೆದೊಯ್ಯಿರಿ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚಳಿಗಾಲದಲ್ಲಿಯೇ ಕಿವಿ ನೋವು, ತುರಿಕೆ, ಸೋಂಕಿನ ಸಮಸ್ಯೆ ಕಾಡುವುದೇಕೆ.. ಈ ಸಮಯದಲ್ಲಿ ನಾವೇನು ಮಾಡಬೇಕು?
World Idli Day: ಇಡ್ಲಿ ದಿನದಂದೇ ದೋಸೆ ತಿಂದ ಕಥೆ ನಿಮಗೆ ಗೊತ್ತಾ? ದೀಪಿಕಾ ಪಡುಕೋಣೆ ಈ ಯಡವಟ್ಟು ಮಾಡಿದ್ಯಾಕೆ?