World Brain Day: ಎಲ್ಲಾ ಮರೆತ್‌ ಹೋಗ್ತಿದೆ ಅನ್ನೋದಲ್ಲ, ಮೆದುಳನ್ನು ಆರೋಗ್ಯವಾಗಿಟ್ಟುಕೊಳ್ಳಿ

Published : Jul 22, 2022, 10:28 AM IST
World Brain Day: ಎಲ್ಲಾ ಮರೆತ್‌ ಹೋಗ್ತಿದೆ ಅನ್ನೋದಲ್ಲ, ಮೆದುಳನ್ನು ಆರೋಗ್ಯವಾಗಿಟ್ಟುಕೊಳ್ಳಿ

ಸಾರಾಂಶ

ಮನುಷ್ಯ ಆರೋಗ್ಯವಾಗಿರಬೇಕಾದರೆ ಮನುಷ್ಯನ ಎಲ್ಲಾ ಅಂಗಾಂಗ ಸರಿಯಾಗಿ ಕಾರ್ಯ ನಿರ್ವಹಿಸಬೇಕಾದುದು ಮುಖ್ಯ. ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವು ಮೆದುಳಿನ ಆರೋಗ್ಯಕ್ಕೂ ಸಂಬಂಧಿಸಿದೆ. ಹಾಗಿದ್ರೆ ಮೆದುಳನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಹೇಗೆ ?

ಇಂದು ಜುಲೈ 22. ವಿಶ್ವ ಮೆದುಳಿನ ದಿನ. ವರ್ಲ್ಡ್ ಫೆಡರೇಶನ್ ಆಫ್ ನ್ಯೂರಾಲಜಿ (WFN) ಪ್ರತಿ ವರ್ಷ ಜುಲೈ 22 ರಂದು ವಿಶ್ವ ಮೆದುಳಿನ ದಿನವನ್ನು ಆಚರಿಸುತ್ತದೆ. ಪ್ರತಿ ವರ್ಷ ವಿಭಿನ್ನ ವಿಷಯದ ಮೇಲೆ ಕೇಂದ್ರೀಕರಿಸಲಾಗುತ್ತದೆ. ನಮ್ಮ ಒಟ್ಟಾರೆ ಆರೋಗ್ಯಕ್ಕೆ ಮೆದುಳಿನ ಆರೋಗ್ಯ ಎಷ್ಟು ಮುಖ್ಯ ಎಂಬುದನ್ನು ಈ ದಿನ ತಿಳಿಸುತ್ತೆ. ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವು ಮೆದುಳಿನ ಆರೋಗ್ಯಕ್ಕೂ ಸಂಬಂಧಿಸಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳು, ಖಿನ್ನತೆ ಮತ್ತು ಆತಂಕಗಳು ಮೆದುಳಿನ ಆರೋಗ್ಯಕ್ಕೆ ಅಪಾಯಕಾರಿ ಅಂಶಗಳಾಗಿವೆ. ಮೆದುಳಿನ ಮಂಜು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಮೆದುಳಿನ ಆರೋಗ್ಯವು ಪ್ರತಿಯೊಬ್ಬ ವ್ಯಕ್ತಿಯು ತನ್ನ ಸ್ವಂತ ಸಾಮರ್ಥ್ಯವನ್ನು ಅರಿತುಕೊಳ್ಳುವ ಮತ್ತು ಜೀವನದ ಸಂದರ್ಭಗಳನ್ನು ನಿಭಾಯಿಸಲು ತನ್ನ ಅರಿವಿನ, ಭಾವನಾತ್ಮಕ, ಮಾನಸಿಕ ಮತ್ತು ನಡವಳಿಕೆಯ ಕಾರ್ಯಗಳನ್ನು ಕಂಡುಕೊಳ್ಳುವ ಸ್ಥಿತಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಗಮನಸೆಳೆದಿದೆ.

ವ್ಯಕ್ತಿಯ ಜೀವನಶೈಲಿಯು ಮೆದುಳಿನ (Brain) ಆರೋಗ್ಯದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಪ್ರಮುಖ ಜೀವನಶೈಲಿ (Lifestyle) ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರು ನೆನಪಿನ ಕೊರತೆಯ (Memory loss) ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧನೆಗಳು ಸೂಚಿಸುತ್ತವೆ. ಕಡಿಮೆ ಎಣ್ಣೆ ಮತ್ತು ಕೊಬ್ಬು ಮತ್ತು ಹಣ್ಣುಗಳು ಮತ್ತು ತರಕಾರಿಗಳಲ್ಲಿ ಸಮೃದ್ಧವಾಗಿರುವ ಸಮತೋಲಿತ ಮತ್ತು ಆರೋಗ್ಯಕರ ಆಹಾರವು ಮೆದುಳಿನ ಆರೋಗ್ಯಕ್ಕೆ (Health) ಸಹಾಯಕವಾಗಿದೆ. ಹಸಿರು ಎಲೆಗಳ ತರಕಾರಿ (Vegetable)ಗಳನ್ನು ಹೆಚ್ಚು ಸೇವಿಸುವವರಲ್ಲಿ ಬುದ್ಧಿಮಾಂದ್ಯತೆಯ ಅಪಾಯ ಕಡಿಮೆಯಾಗುತ್ತದೆ ಎಂದು ಸಂಶೋಧನೆಯು ಕಂಡುಹಿಡಿದಿದೆ.

ತಲೆಯ ಗಾಯ ಹಳೆಯದಾಗಿರಬಹುದು. ಆದರ ಇಗ್ನೋರ್ ಮಾಡೋದು ಅಪಾಯ

ಮೆದುಳಿನ ಆರೋಗ್ಯ ಕಾಪಾಡಲು ಕೆಲವು ಸಲಹೆಗಳು

ನಿಯಮಿತ ವ್ಯಾಯಾಮ: ನಿಯಮಿತ ವ್ಯಾಯಾಮ ಆರೋಗ್ಯಕರ ಜೀವನಶೈಲಿಯ ಭಾಗವಾಗಿದೆ. ಇದು ನಮ್ಮ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ ಮೆದುಳಿನ ಆಲೋಚನೆ ಮತ್ತು ಭಾವನಾತ್ಮಕ ಸಾಮರ್ಥ್ಯಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿಯಮಿತ ವ್ಯಾಯಾಮವು ಸ್ಮರಣೆಯನ್ನು ಸುಧಾರಿಸುತ್ತದೆ ಮತ್ತು ಆತಂಕ, ಖಿನ್ನತೆ ಮತ್ತು ಬುದ್ಧಿಮಾಂದ್ಯತೆಯನ್ನು ಕಡಿಮೆ ಮಾಡುತ್ತದೆ.

ಆರೋಗ್ಯಕರ ನಿದ್ರೆ: ಆರೋಗ್ಯವಾಗಿರಲು ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ನಿದ್ದೆ ಆಗಬೇಕಾದುದು ಮುಖ್ಯವಾಗಿದೆ. 7-8 ಗಂಟೆಗಳ ನಿದ್ದೆ ಪ್ರತಿಯೊಬ್ಬರಿಗೂ ಮುಖ್ಯವಾಗಿದೆ. ನಮ್ಮ ಮಾನಸಿಕ ಆರೋಗ್ಯಕ್ಕೆ ನಿದ್ದೆ ಮುಖ್ಯ. ನಿದ್ರೆಯ ಕೊರತೆಯು ತೂಕ ಹೆಚ್ಚಾಗುವುದು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

ಸರಿಯಾದ ವಿಶ್ರಾಂತಿ: ವಿದ್ಯುತ್‌ ನಿಂದ ಕಾರ್ಯನಿರ್ವಹಿಸುವ ಮೆಷಿನ್‌ಗಳಿಗೇ ವಿಶ್ರಾಂತಿ ನೀಡುತ್ತೇವೆ. ಹೀಗಿರುವಾಗ ದಿನಪೂರ್ತಿ ಕಾರ್ಯ ನಿರ್ವಹಿಸುವ ಮನುಷ್ಯನ ದೇಹಕ್ಕೆ ವಿಶ್ರಾಂತಿ ಇಲ್ಲದಿದ್ದರೆ ಆದೀತೆ. ಹೀಗಾಗಿ ದೇಹವನ್ನು ಸಂಪೂರ್ಣ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳೋ ಹಾಗೇ ಸರಿಯಾದ ರೀತಿಯಲ್ಲಿ ವಿಶ್ರಾಂತಿಯನ್ನೂ ಪಡೆಯಿರಿ. ದೈಹಿಕ, ಮಾನಸಿಕ ಒತ್ತಡವು ಮೆದುಳಿಗೆ ಒತ್ತಡವನ್ನು ತರುತ್ತದೆ. ಹೆಚ್ಚಿದ ಒತ್ತಡವು ಆಲ್ಝೈಮರ್‌ನ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಿನ ಅಪಾಯದೊಂದಿಗೆ ಸಂಬಂಧಿಸಿದೆ. ಯೋಗ ಮತ್ತು ಧ್ಯಾನವು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಕ್ಕಳಿಗೆ ಇಂಥಾ ಆಹಾರ ಕೊಟ್ರೆ ಸಿಕ್ಕಾಪಟ್ಟೆ ಬ್ರಿಲಿಯೆಂಟ್ ಆಗ್ತಾರೆ

ಧೂಮಪಾನ ಮಾಡದಿರಿ: ಧೂಮಪಾನಿಗಳ ಸೆರೆಬ್ರಲ್ ಕಾರ್ಟೆಕ್ಸ್ ಧೂಮಪಾನಿಗಳಲ್ಲದವರಿಗಿಂತ ತೆಳ್ಳಗಿರುವುದು ಕಂಡುಬಂದಿದೆ. ಸೆರೆಬ್ರಲ್ ಕಾರ್ಟೆಕ್ಸ್ ಮೆದುಳಿನ ಭಾಗವಾಗಿದೆ. ಧೂಮಪಾನವು ಮೆದುಳಿನ ಮೇಲೆ ಪರಿಣಾಮ ಬೀರುವುದು ಮಾತ್ರವಲ್ಲದೆ ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಇದು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುತ್ತದೆ. ಇದು ಮೂತ್ರಪಿಂಡ ವೈಫಲ್ಯಕ್ಕೆ ಪ್ರಮುಖ ಕಾರಣವಾಗುತ್ತದೆ.

ಆರೋಗ್ಯಕರ ಆಹಾರಕ್ರಮ ಅನುಸರಿಸಿ: ಮೆದುಳನ್ನು ಆರೋಗ್ಯವಾಗಿಡಲು ಆಹಾರಕ್ರಮವು ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಸ್ಯಾಚುರೇಟೆಡ್, ಟ್ರಾನ್ಸ್ ಕೊಬ್ಬು, ಉಪ್ಪು ಮತ್ತು ಸಕ್ಕರೆಯಲ್ಲಿ ಹೆಚ್ಚಿನ ಆಹಾರವನ್ನು ತಪ್ಪಿಸಿ. ಫೈಬರ್, ಖನಿಜಗಳು, ಜೀವಸತ್ವಗಳು, ಧಾನ್ಯಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿರುವ ಆಹಾರಗಳ ನಿಯಮಿತ ಸೇವನೆಯು ಮೆದುಳು ಹಾಗೂ ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ.

ಸಾಕಷ್ಟು ನೀರು ಕುಡಿಯಿರಿ: ಮೆದುಳಿನ ಜೀವಕೋಶಗಳು ಪರಸ್ಪರ ಸಂವಹನ ನಡೆಸಲು ಸಹಾಯ ಮಾಡುತ್ತದೆ. ಮೆದುಳಿನ ಕಾರ್ಯಚಟುವಟಿಕೆಗೆ ಅಡ್ಡಿಪಡಿಸುವ ವಿಷ ಮತ್ತು ಕಲ್ಮಶಗಳನ್ನು ತೆಗೆದುಹಾಕುತ್ತದೆ. ನಿಮ್ಮ ಮೆದುಳಿಗೆ ಪೋಷಕಾಂಶಗಳನ್ನು ನೀಡುತ್ತದೆ. ಇದು ನಮ್ಮ ದೇಹವನ್ನು ಹೈಡ್ರೇಟ್ ಆಗಿ ಇಡುತ್ತದೆ. ಆದರೆ ಕಿಡ್ನಿ ಸರಿಯಾಗಿ ಕಾರ್ಯನಿರ್ವಹಿಸಲು ನೀರು ಕುಡಿಯುವುದು ಸಹಕಾರಿ. ಇದು ನಮ್ಮ ದೇಹದಲ್ಲಿರುವ ಎಲ್ಲಾ ವಿಷಗಳನ್ನು ಶೋಧಿಸುತ್ತದೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚಳಿಗಾಲದಲ್ಲಿ ಡಯಾಬಿಟಿಸ್ ರೋಗಿಗಳು ಈ ಸಣ್ಣ ಬಿರುಕನ್ನ ನಿರ್ಲಕ್ಷಿಸಿದರೂ ಕಾಲನ್ನೇ ಕತ್ತರಿಸಬೇಕಾಗಬಹುದು!
ಆರೋಗ್ಯಕರ ತುಳಸಿ ಅಗೆದು ತಿಂದ್ರೆ ಅಪಾಯ, ಧರ್ಮ- ಆಯುರ್ವೇದ ಹೇಳೋದೇನು?