ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್-ಟೀಂ ಇಂಡಿಯಾದಲ್ಲಿ 2 ಬದಲಾವಣೆ!

Published : Jul 06, 2019, 02:36 PM ISTUpdated : Jul 06, 2019, 03:18 PM IST
ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್-ಟೀಂ ಇಂಡಿಯಾದಲ್ಲಿ 2 ಬದಲಾವಣೆ!

ಸಾರಾಂಶ

ವಿಶ್ವಕಪ್ ಲೀಗ್ ಟೂರ್ನಿ ಅಂತಿಮ ದಿನಕ್ಕೆ ಕಾಲಿಟ್ಟಿದೆ. ಇಂದಿನ(ಜು.06) 2 ಪಂದ್ಯದೊಂದಿಗೆ ಲೀಗ್ ಹಂತ ಮುಕ್ತಾಯಗೊಳ್ಳಲಿದೆ. ಇಂದಿನ ಮೊದಲ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ  ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿದೆ. 

ಲೀಡ್ಸ್(ಜು.06): ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ ಇಂದು ಶ್ರೀಲಂಕಾ ವಿರುದ್ಧ ಅಂತಿಮ ಲೀಗ್ ಪಂದ್ಯ ಆಡುತ್ತಿದೆ. ಟಾಸ್ ಗೆದ್ದ  ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದೆ. ಯಜುವೇಂದ್ರ ಚಹಾಲ್ ಬದಲು ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡಲಾಗಿದೆ. ಇನ್ನು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

 

8 ಪಂದ್ಯದಲ್ಲಿ 6 ಗೆಲುವು 1 ಸೋಲು ಅನುಭವಿಸಿರುವ ಟೀಂ ಇಂಡಿಯಾ 13 ಅಂಕದೊಂದಿಗೆ ಸೆಮಿಫೈನಲ್ ಸ್ಥಾನ ಖಚಿತ ಪಡಿಸಿದೆ. ಇನ್ನೊಂದು ಗೆಲುವು ಟೀಂ ಇಂಡಿಯಾವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯಲಿದೆ. 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ತಂಡವನ್ನು ಮಣಿಸಿದರೆ ಮತ್ತೆ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರದಲಿದೆ. ಶ್ರೀಲಂಕಾ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿನ ಸೋಲು ಅಥವಾ ಗೆಲುವು ಲಂಕಾ ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಗಳಾಲ್ಲ. 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!