
ನವದೆಹಲಿ(ಸೆ.16): ಕೊರೋನಾ ಸಾಂಕ್ರಾಮಿಕ ರೋಗ ಮತ್ತು ಅದರ ನಿಯಂತ್ರಣಕ್ಕೆ ದೇಶಾದ್ಯಂತ ಜಾರಿ ಮಾಡಿದ್ದ ಲಾಕ್ಡೌನ್ನಿಂದ ಉದ್ಯೋಗ ಕಳೆದುಕೊಂಡು, ಕಂಗೆಟ್ಟು ದೇಶಾದ್ಯಂತ ಸುಮಾರು 1.05 ಕೋಟಿ ವಲಸೆ ಕಾರ್ಮಿಕರು ತವರು ರಾಜ್ಯಗಳಿಗೆ ಮರಳಿದ್ದಾರೆ ಎಂದು ಸ್ವತಃ ಸರ್ಕಾರ ತಿಳಿಸಿದೆ.
ಲೋಕಸಭೆಯಲ್ಲಿ ಈ ಕುರಿತ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಖಾತೆ ಸಚಿವ ಸಂತೋಷ ಕುಮಾರ್, ದೇಶಾದ್ಯಂತ ಒಟ್ಟು 4 ಕೋಟಿ ವಲಸೆ ಕಾರ್ಮಿಕರಿದ್ದು ಕೊರೋನಾ ಲಾಕ್ಡೌನ್ನಿಂದಾಗಿ ಅವರಲ್ಲಿ ಶೇ.25ರಷ್ಟುಅಥವಾ 1.05 ಕೋಟಿ ವಲಸೆ ಕಾರ್ಮಿಕರು ತವರು ರಾಜ್ಯಗಳಿಗೆ ಮರಳಿದ್ದಾರೆ.
ಅದರಲ್ಲಿ ಉತ್ತರ ಪ್ರದೇಶಕ್ಕೆ ಅತಿ ಹೆಚ್ಚು ವಲಸೆ ಕಾರ್ಮಿಕರು ಅಂದರೆ 32.50 ಲಕ್ಷ ಕಾರ್ಮಿಕರು ಮರಳಿದ್ದರೆ, ಬಿಹಾರಕ್ಕೆ 15 ಲಕ್ಷ ಕಾರ್ಮಿಕರು, ಪಶ್ಚಿಮ ಬಂಗಾಳ, ರಾಜಸ್ಥಾನಕ್ಕೆ ತಲಾ 13.08 ಲಕ್ಷ ವಲಸೆ ಕಾರ್ಮಿಕರು ಮರಳಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಮಧ್ಯಪ್ರದೇಶಕ್ಕೆ 7.54 ಲಕ್ಷ ಕಾರ್ಮಿಕರು, ಜಾರ್ಖಂಡ್ಗೆ 5.30 ಲಕ್ಷ, ಪಂಜಾಬ್ಗೆ 5.16 ಲಕ್ಷ, ಅಸ್ಸಾಂ ರಾಜ್ಯಕ್ಕೆ 4.26 ಲಕ್ಷ, ಕೇರಳಕ್ಕೆ 3.11 ಲಕ್ಷ ವಲಸೆ ಕಾರ್ಮಿಕರು ಮರಳಿದ್ದಾರೆ. ಆದರೆ ಸರ್ಕಾರ ನೀಡಿರುವ ಈ ಮಾಹಿತಿಯಲ್ಲಿ ಒಡಿಶಾ, ಛತ್ತೀಸ್ಗಢ, ಉತ್ತರಾಖಂಡ, ಕರ್ನಾಟಕ, ಹಿಮಾಚಲ ಪ್ರದೇಶ, ದೆಹಲಿ, ಗೋವಾ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರ ವಿವರ ಇಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ